ಜನ ಮನದ ನಾಡಿ ಮಿಡಿತ

Advertisement

ಕುಡುಕ ಗಂಡನ ಕಿರುಕುಳಕ್ಕೆ ಹೆಂಡತಿ ಮಕ್ಕಳು ಆತ್ಮಹತ್ಯೆ, ಪುತ್ರಿ ಸಾವು!

ಚಾಮರಾಜನಗರ: ಕುಡಿತದ ಚಟಕ್ಕೆ ಬಿದ್ದು ನಲುಗಿಹೋದ ಕುಟುಂಬಗಳು ಅದೆಷ್ಟೋ ಇದೆ. ಇಂತದ್ದೇ ಒಂದು ಮನಕಲುಕುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ದಿನನಿತ್ಯ ಮಧ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಗಂಡನಿಂದ ಬೇಸತ್ತ ಹೆಂಡತಿ ತನ್ನಿಬ್ಬರು ಮಕ್ಕಳಿಗೂ ವಿಷ ಕೊಡಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನ ಹಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಎಂಟು ವರ್ಷದ ಮಗಳು ಸಿಂಧು ಸಾವನಪ್ಪಿದರೆ ತಾಯಿ ಶೀಲಾ (25) ಮತ್ತು ಪುತ್ರ ಯಶವಂತ್ (12) ಸ್ಥಿತಿ ಗಂಭೀರವಾಗಿದೆ. ಪತಿ ಮಾದೇಶ್ ವಿಪರೀತ ಕುಡಿಯುತ್ತಿದ್ದ ಪ್ರತಿನಿತ್ಯ ಮಧ್ಯ ಸೇವಿಸಿ ಬಂದು ಪತ್ನಿ ಶೀಲಾಗೆ ಕಿರುಕುಳ ನೀಡುತ್ತಿದ್ದರಿಂದ ನಿರಂತರವಾಗಿ ಗಂಡ ಹೆಂಡತಿ ಮಧ್ಯ ಜಗಳ ಆಗಿತ್ತು. ಇದರಿಂದ ಮನನೊಂದು ಶೀಲಾ 12ರಂದು ಆರು ಗಂಟೆ ಸಮಯದಲ್ಲಿ ತನ್ನಿಬ್ಬರು ಮಕ್ಕಳಿಗೆ ವಿಷ ಕೊಡಿಸಿ ತಾನು ಕುಡಿದಿದ್ದಾಳೆ. ಪುತ್ರಿ ಮರಣ ಹೊಂದಿದ್ದಾಳೆ ಹಾಗೂ ಪುತ್ರ, ಪತ್ನಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರು ತಂದೆ ಮಾದೇಶ್ ಆಸ್ಪತ್ರೆ ಬಂದಿಲ್ಲ. ಹೀಗಾಗಿ ಮಾದೇಶ್ವರ ಸಂಬಂಧಿಕರು ಅಕ್ರೋಶ ಹೊರಹಾಕಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!