ಜನ ಮನದ ನಾಡಿ ಮಿಡಿತ

Advertisement

ಕುಡುಕ ಗಂಡನ ಕಿರುಕುಳಕ್ಕೆ ಹೆಂಡತಿ ಮಕ್ಕಳು ಆತ್ಮಹತ್ಯೆ, ಪುತ್ರಿ ಸಾವು!

ಚಾಮರಾಜನಗರ: ಕುಡಿತದ ಚಟಕ್ಕೆ ಬಿದ್ದು ನಲುಗಿಹೋದ ಕುಟುಂಬಗಳು ಅದೆಷ್ಟೋ ಇದೆ. ಇಂತದ್ದೇ ಒಂದು ಮನಕಲುಕುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ದಿನನಿತ್ಯ ಮಧ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಗಂಡನಿಂದ ಬೇಸತ್ತ ಹೆಂಡತಿ ತನ್ನಿಬ್ಬರು ಮಕ್ಕಳಿಗೂ ವಿಷ ಕೊಡಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನ ಹಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಎಂಟು ವರ್ಷದ ಮಗಳು ಸಿಂಧು ಸಾವನಪ್ಪಿದರೆ ತಾಯಿ ಶೀಲಾ (25) ಮತ್ತು ಪುತ್ರ ಯಶವಂತ್ (12) ಸ್ಥಿತಿ ಗಂಭೀರವಾಗಿದೆ. ಪತಿ ಮಾದೇಶ್ ವಿಪರೀತ ಕುಡಿಯುತ್ತಿದ್ದ ಪ್ರತಿನಿತ್ಯ ಮಧ್ಯ ಸೇವಿಸಿ ಬಂದು ಪತ್ನಿ ಶೀಲಾಗೆ ಕಿರುಕುಳ ನೀಡುತ್ತಿದ್ದರಿಂದ ನಿರಂತರವಾಗಿ ಗಂಡ ಹೆಂಡತಿ ಮಧ್ಯ ಜಗಳ ಆಗಿತ್ತು. ಇದರಿಂದ ಮನನೊಂದು ಶೀಲಾ 12ರಂದು ಆರು ಗಂಟೆ ಸಮಯದಲ್ಲಿ ತನ್ನಿಬ್ಬರು ಮಕ್ಕಳಿಗೆ ವಿಷ ಕೊಡಿಸಿ ತಾನು ಕುಡಿದಿದ್ದಾಳೆ. ಪುತ್ರಿ ಮರಣ ಹೊಂದಿದ್ದಾಳೆ ಹಾಗೂ ಪುತ್ರ, ಪತ್ನಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರು ತಂದೆ ಮಾದೇಶ್ ಆಸ್ಪತ್ರೆ ಬಂದಿಲ್ಲ. ಹೀಗಾಗಿ ಮಾದೇಶ್ವರ ಸಂಬಂಧಿಕರು ಅಕ್ರೋಶ ಹೊರಹಾಕಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!