ಚಾಮರಾಜನಗರ: ಕುಡಿತದ ಚಟಕ್ಕೆ ಬಿದ್ದು ನಲುಗಿಹೋದ ಕುಟುಂಬಗಳು ಅದೆಷ್ಟೋ ಇದೆ. ಇಂತದ್ದೇ ಒಂದು ಮನಕಲುಕುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ದಿನನಿತ್ಯ ಮಧ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಗಂಡನಿಂದ ಬೇಸತ್ತ ಹೆಂಡತಿ ತನ್ನಿಬ್ಬರು ಮಕ್ಕಳಿಗೂ ವಿಷ ಕೊಡಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನ ಹಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಎಂಟು ವರ್ಷದ ಮಗಳು ಸಿಂಧು ಸಾವನಪ್ಪಿದರೆ ತಾಯಿ ಶೀಲಾ (25) ಮತ್ತು ಪುತ್ರ ಯಶವಂತ್ (12) ಸ್ಥಿತಿ ಗಂಭೀರವಾಗಿದೆ. ಪತಿ ಮಾದೇಶ್ ವಿಪರೀತ ಕುಡಿಯುತ್ತಿದ್ದ ಪ್ರತಿನಿತ್ಯ ಮಧ್ಯ ಸೇವಿಸಿ ಬಂದು ಪತ್ನಿ ಶೀಲಾಗೆ ಕಿರುಕುಳ ನೀಡುತ್ತಿದ್ದರಿಂದ ನಿರಂತರವಾಗಿ ಗಂಡ ಹೆಂಡತಿ ಮಧ್ಯ ಜಗಳ ಆಗಿತ್ತು. ಇದರಿಂದ ಮನನೊಂದು ಶೀಲಾ 12ರಂದು ಆರು ಗಂಟೆ ಸಮಯದಲ್ಲಿ ತನ್ನಿಬ್ಬರು ಮಕ್ಕಳಿಗೆ ವಿಷ ಕೊಡಿಸಿ ತಾನು ಕುಡಿದಿದ್ದಾಳೆ. ಪುತ್ರಿ ಮರಣ ಹೊಂದಿದ್ದಾಳೆ ಹಾಗೂ ಪುತ್ರ, ಪತ್ನಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರು ತಂದೆ ಮಾದೇಶ್ ಆಸ್ಪತ್ರೆ ಬಂದಿಲ್ಲ. ಹೀಗಾಗಿ ಮಾದೇಶ್ವರ ಸಂಬಂಧಿಕರು ಅಕ್ರೋಶ ಹೊರಹಾಕಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…