ಚಾಮರಾಜನಗರ: ಕುಡಿತದ ಚಟಕ್ಕೆ ಬಿದ್ದು ನಲುಗಿಹೋದ ಕುಟುಂಬಗಳು ಅದೆಷ್ಟೋ ಇದೆ. ಇಂತದ್ದೇ ಒಂದು ಮನಕಲುಕುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ದಿನನಿತ್ಯ ಮಧ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಗಂಡನಿಂದ ಬೇಸತ್ತ ಹೆಂಡತಿ ತನ್ನಿಬ್ಬರು ಮಕ್ಕಳಿಗೂ ವಿಷ ಕೊಡಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನ ಹಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಎಂಟು ವರ್ಷದ ಮಗಳು ಸಿಂಧು ಸಾವನಪ್ಪಿದರೆ ತಾಯಿ ಶೀಲಾ (25) ಮತ್ತು ಪುತ್ರ ಯಶವಂತ್ (12) ಸ್ಥಿತಿ ಗಂಭೀರವಾಗಿದೆ. ಪತಿ ಮಾದೇಶ್ ವಿಪರೀತ ಕುಡಿಯುತ್ತಿದ್ದ ಪ್ರತಿನಿತ್ಯ ಮಧ್ಯ ಸೇವಿಸಿ ಬಂದು ಪತ್ನಿ ಶೀಲಾಗೆ ಕಿರುಕುಳ ನೀಡುತ್ತಿದ್ದರಿಂದ ನಿರಂತರವಾಗಿ ಗಂಡ ಹೆಂಡತಿ ಮಧ್ಯ ಜಗಳ ಆಗಿತ್ತು. ಇದರಿಂದ ಮನನೊಂದು ಶೀಲಾ 12ರಂದು ಆರು ಗಂಟೆ ಸಮಯದಲ್ಲಿ ತನ್ನಿಬ್ಬರು ಮಕ್ಕಳಿಗೆ ವಿಷ ಕೊಡಿಸಿ ತಾನು ಕುಡಿದಿದ್ದಾಳೆ. ಪುತ್ರಿ ಮರಣ ಹೊಂದಿದ್ದಾಳೆ ಹಾಗೂ ಪುತ್ರ, ಪತ್ನಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರು ತಂದೆ ಮಾದೇಶ್ ಆಸ್ಪತ್ರೆ ಬಂದಿಲ್ಲ. ಹೀಗಾಗಿ ಮಾದೇಶ್ವರ ಸಂಬಂಧಿಕರು ಅಕ್ರೋಶ ಹೊರಹಾಕಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…