ಮುಲ್ಕಿ:ಪುನರೂರು,ತೋಕೂರು, ಕೆರೆಕಾಡು ವಲಯದ ವಿಪ್ರಸಂಪದದ ವತಿಯಿಂದ ಶಿಕ್ಷಣ ಕ್ಷೇತ್ರದ ಸಾಧಕರಿಗೆ ಗೌರವ ಕಾರ್ಯಕ್ರಮ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಪ್ರಸಂಪದದ ಅಧ್ಯಕ್ಷರಾದ ಸುಧಾಕರ ರಾವ್ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸುಬ್ರಮಣ್ಯ ಕೊರಿಯಾರ್ ಮಾತನಾಡಿ ಉತ್ತಮ ಸಂಘಟನೆಯ ಮೂಲಕ ಸೇವಾ ಕಾರ್ಯಕ್ರಮಗಳನ್ನು ನಡೆಸಿದರೆ ಸಂಸ್ಥೆಯ ಉನ್ನತಿ ಸಾಧ್ಯ ಎಂದರು
ಮುಖ್ಯ ಅತಿಥಿಗಳಾಗಿ ಚಿತ್ರಾಪುರದಲ್ಲಿ ನಡೆಯಲಿರುವ ಕೋಟಿ ಗಾಯತ್ರಿ ಜಪ ಯಜ್ಞದ ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಮಾತನಾಡಿ ಎಲ್ಲಾ ವಿಪ್ರ ಬಾಂಧವರು ಅ.26 ಮತ್ತು 27ರಂದು ಚಿತ್ರಾಪುರ ಮಠದ ಆವರಣದಲ್ಲಿ ನಡೆಯಲಿರುವ ಸಾಂಘಿಕ ಕೋಟಿ ಗಾಯತ್ರಿ ಜಪ ಯಜ್ಞದಲ್ಲಿ ತನು ಮನ ಧನದಿಂದ ಸಂಘಟನಾತ್ಮಕವಾಗಿ ಭಾಗವಹಿಸಿ ಯಶಸ್ವಿಗೊಳಿಸಲು ಮನವಿ ಮಾಡಿದರು. ವೇದಿಕೆಯಲ್ಲಿ ಯುಗಪುರುಷ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ಹಿರಿಯರಾದ ಉದ್ಯಮಿ ಪಟೇಲ್ ರಾಮಮೂರ್ತಿ ರಾವ್, ಗೌರವಾಧ್ಯಕ್ಷ ಪಟೇಲ್ ವಾಸುದೇವ ರಾವ್, ಸ್ಥಾಪಕ ಅಧ್ಯಕ್ಷ ಸುರೇಶ್ ರಾವ್ ನೀರಳಿಕೆ, ಕಾರ್ಯದರ್ಶಿ ಚಂದ್ರಶೇಖರ್ ರಾವ್, ಕೋಶಾಧಿಕಾರಿ ಅವಿನಾಶ್ ರಾವ್,ಯುವ ವೇದಿಕೆ ಅಧ್ಯಕ್ಷ ಶಶಾಂಕ್ ಮುಚ್ಚಿಂತಾಯ,
ಮತ್ತಿತರರು ಉಪಸ್ಥಿತರಿದ್ದರು.
ಸುಧಾಕರ್ ರಾವ್ ಸ್ವಾಗತಿಸಿದರು
ಪ್ರಾಣೇಶ್ ಭಟ್ ದೇoದಡ್ಕ ನಿರೂಪಿಸಿದರು,ಶಶಾಂಕ್ ಮುಚ್ಚಿಂತಾಯ ಧನ್ಯವಾದ ಅರ್ಪಿಸಿದರು
ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕುಮಾರಿ ಅರ್ಚನಾ ರಾವ್ ಕೆರೆಕಾಡು ರವರನ್ನು ಗೌರವಿಸಲಾಯಿತು ಹಾಗೂ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…