ಜನ ಮನದ ನಾಡಿ ಮಿಡಿತ

Advertisement

ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಅಥ್ಲೆಟಿಕ್ಸ್ ಕೂಟ ಎಲ್‌ಐಸಿ ತಂಡ ಚಾಂಪಿಯನ್‌

ಮೂಡುಬಿದಿರೆ : ಉತ್ತರಾಖಂಡ್‌ ರಾಜಧಾನಿ ಡೆಹ್ರಾಡೂನ್‌ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಕ್ರೀಡಾಕೂಟದಲ್ಲಿ ಎಲ್‌ಐಸಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ತಂಡದ ಸದಸ್ಯೆ, ಆಳ್ವಾಸ್ ಕಾಲೇಜಿನ ಹಳೆ ವಿದ್ಯಾರ್ಥಿನಿ ಶಿರ್ತಾಡಿಯ ಜಾಯ್ಲಿನ್ ಲೋಬೊ ಅವರು ಲಾಂಗ್ ಜಂಪ್‌ ಮತ್ತು ಟ್ರಿಬ್ಬಲ್ ಜಂಪ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮೂಲಕ ಚಿನ್ನದ ಪದಕ ಹಾಗೂ 4×100 ಮತ್ತು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ‌ ಗಳಿಸಿ ಗಮನ ಸೆಳೆದರು. ಹೈಜಂಪ್‌ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ, ಜಾವೆಲಿನ್‌ ಮತ್ತು ಶಾಟ್‌ಪುಟ್‌ ಕ್ರೀಡೆಯಲ್ಲಿ ಶಹೆಜಹಾನಿ ರವರು ಚಿನ್ನದ ಪದಕ ಮತ್ತು 4×100 ರಿಲೇ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಹಿರಿಮೆಗೆ ಪಾತ್ರರಾದರು.

ಇತರ ಕ್ರೀಡಾಪಟುಗಳಾದ ಹರ್ಷಿಣಿ ಅವರು ಹೈಜಂಪ್‌ನಲ್ಲಿ ಚಿನ್ನ, ಟ್ರಿಪ್ಪಲ್ ಜಂಪ್ ಹಾಗು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ‌ವನ್ನು ಗೆಲ್ಲುವ ಮೂಲಕ ತಂಡದ ಸಾಧನೆಗೆ ಗಣನೀಯ ಕೊಡುಗೆ ನೀಡಿದರು. ಈ ಮೂಲಕ ಎಲ್ ಐಸಿ ತಂಡ ಐದು ವಿಭಾಗಳಲ್ಲಿ ಚಾಂಪಿಯನ್ ಅಗಿ ಹೊರಹೊಮ್ಮಿತು.

ಎಲ್ ಐ ಸಿ ತಂಡವು ಪುರುಷರ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಆಗುವುದರ ಜೊತೆಗೆ ಪುರುಷರ ಫೀಲ್ಡ್ ಮತ್ತು ಟ್ರಾಕ್ ಚಾಂಪಿಯನ್, ಮಹಿಳಾ ಫೀಲ್ಡ್ ಚಾಂಪಿಯನ್ ಪ್ರಶಸ್ತಿಗೂ ಪಾತ್ರವಾಯಿತು.

ಕ್ರೀಡಾಕೂಟದಲ್ಲಿ ಗಣನೀಯ ಸಾಧನೆ ಮಾಡಿದ ತಂಡದ ಸದಸ್ಯರಿಗೆ ಎಲ್‌ಐಸಿ ಸಂಸ್ಥೆಯು ಅಭಿನಂದಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!