ಜನ ಮನದ ನಾಡಿ ಮಿಡಿತ

Advertisement

ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಅಥ್ಲೆಟಿಕ್ಸ್ ಕೂಟ ಎಲ್‌ಐಸಿ ತಂಡ ಚಾಂಪಿಯನ್‌

ಮೂಡುಬಿದಿರೆ : ಉತ್ತರಾಖಂಡ್‌ ರಾಜಧಾನಿ ಡೆಹ್ರಾಡೂನ್‌ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಕ್ರೀಡಾಕೂಟದಲ್ಲಿ ಎಲ್‌ಐಸಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ತಂಡದ ಸದಸ್ಯೆ, ಆಳ್ವಾಸ್ ಕಾಲೇಜಿನ ಹಳೆ ವಿದ್ಯಾರ್ಥಿನಿ ಶಿರ್ತಾಡಿಯ ಜಾಯ್ಲಿನ್ ಲೋಬೊ ಅವರು ಲಾಂಗ್ ಜಂಪ್‌ ಮತ್ತು ಟ್ರಿಬ್ಬಲ್ ಜಂಪ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮೂಲಕ ಚಿನ್ನದ ಪದಕ ಹಾಗೂ 4×100 ಮತ್ತು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ‌ ಗಳಿಸಿ ಗಮನ ಸೆಳೆದರು. ಹೈಜಂಪ್‌ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ, ಜಾವೆಲಿನ್‌ ಮತ್ತು ಶಾಟ್‌ಪುಟ್‌ ಕ್ರೀಡೆಯಲ್ಲಿ ಶಹೆಜಹಾನಿ ರವರು ಚಿನ್ನದ ಪದಕ ಮತ್ತು 4×100 ರಿಲೇ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಹಿರಿಮೆಗೆ ಪಾತ್ರರಾದರು.

ಇತರ ಕ್ರೀಡಾಪಟುಗಳಾದ ಹರ್ಷಿಣಿ ಅವರು ಹೈಜಂಪ್‌ನಲ್ಲಿ ಚಿನ್ನ, ಟ್ರಿಪ್ಪಲ್ ಜಂಪ್ ಹಾಗು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ‌ವನ್ನು ಗೆಲ್ಲುವ ಮೂಲಕ ತಂಡದ ಸಾಧನೆಗೆ ಗಣನೀಯ ಕೊಡುಗೆ ನೀಡಿದರು. ಈ ಮೂಲಕ ಎಲ್ ಐಸಿ ತಂಡ ಐದು ವಿಭಾಗಳಲ್ಲಿ ಚಾಂಪಿಯನ್ ಅಗಿ ಹೊರಹೊಮ್ಮಿತು.

ಎಲ್ ಐ ಸಿ ತಂಡವು ಪುರುಷರ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಆಗುವುದರ ಜೊತೆಗೆ ಪುರುಷರ ಫೀಲ್ಡ್ ಮತ್ತು ಟ್ರಾಕ್ ಚಾಂಪಿಯನ್, ಮಹಿಳಾ ಫೀಲ್ಡ್ ಚಾಂಪಿಯನ್ ಪ್ರಶಸ್ತಿಗೂ ಪಾತ್ರವಾಯಿತು.

ಕ್ರೀಡಾಕೂಟದಲ್ಲಿ ಗಣನೀಯ ಸಾಧನೆ ಮಾಡಿದ ತಂಡದ ಸದಸ್ಯರಿಗೆ ಎಲ್‌ಐಸಿ ಸಂಸ್ಥೆಯು ಅಭಿನಂದಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!