ಜನ ಮನದ ನಾಡಿ ಮಿಡಿತ

Advertisement

ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಅಥ್ಲೆಟಿಕ್ಸ್ ಕೂಟ ಎಲ್‌ಐಸಿ ತಂಡ ಚಾಂಪಿಯನ್‌

ಮೂಡುಬಿದಿರೆ : ಉತ್ತರಾಖಂಡ್‌ ರಾಜಧಾನಿ ಡೆಹ್ರಾಡೂನ್‌ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಕ್ರೀಡಾಕೂಟದಲ್ಲಿ ಎಲ್‌ಐಸಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ತಂಡದ ಸದಸ್ಯೆ, ಆಳ್ವಾಸ್ ಕಾಲೇಜಿನ ಹಳೆ ವಿದ್ಯಾರ್ಥಿನಿ ಶಿರ್ತಾಡಿಯ ಜಾಯ್ಲಿನ್ ಲೋಬೊ ಅವರು ಲಾಂಗ್ ಜಂಪ್‌ ಮತ್ತು ಟ್ರಿಬ್ಬಲ್ ಜಂಪ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮೂಲಕ ಚಿನ್ನದ ಪದಕ ಹಾಗೂ 4×100 ಮತ್ತು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ‌ ಗಳಿಸಿ ಗಮನ ಸೆಳೆದರು. ಹೈಜಂಪ್‌ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ, ಜಾವೆಲಿನ್‌ ಮತ್ತು ಶಾಟ್‌ಪುಟ್‌ ಕ್ರೀಡೆಯಲ್ಲಿ ಶಹೆಜಹಾನಿ ರವರು ಚಿನ್ನದ ಪದಕ ಮತ್ತು 4×100 ರಿಲೇ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಹಿರಿಮೆಗೆ ಪಾತ್ರರಾದರು.

ಇತರ ಕ್ರೀಡಾಪಟುಗಳಾದ ಹರ್ಷಿಣಿ ಅವರು ಹೈಜಂಪ್‌ನಲ್ಲಿ ಚಿನ್ನ, ಟ್ರಿಪ್ಪಲ್ ಜಂಪ್ ಹಾಗು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ‌ವನ್ನು ಗೆಲ್ಲುವ ಮೂಲಕ ತಂಡದ ಸಾಧನೆಗೆ ಗಣನೀಯ ಕೊಡುಗೆ ನೀಡಿದರು. ಈ ಮೂಲಕ ಎಲ್ ಐಸಿ ತಂಡ ಐದು ವಿಭಾಗಳಲ್ಲಿ ಚಾಂಪಿಯನ್ ಅಗಿ ಹೊರಹೊಮ್ಮಿತು.

ಎಲ್ ಐ ಸಿ ತಂಡವು ಪುರುಷರ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಆಗುವುದರ ಜೊತೆಗೆ ಪುರುಷರ ಫೀಲ್ಡ್ ಮತ್ತು ಟ್ರಾಕ್ ಚಾಂಪಿಯನ್, ಮಹಿಳಾ ಫೀಲ್ಡ್ ಚಾಂಪಿಯನ್ ಪ್ರಶಸ್ತಿಗೂ ಪಾತ್ರವಾಯಿತು.

ಕ್ರೀಡಾಕೂಟದಲ್ಲಿ ಗಣನೀಯ ಸಾಧನೆ ಮಾಡಿದ ತಂಡದ ಸದಸ್ಯರಿಗೆ ಎಲ್‌ಐಸಿ ಸಂಸ್ಥೆಯು ಅಭಿನಂದಿಸಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!