ಮೂಡುಬಿದಿರೆ : ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಕ್ರೀಡಾಕೂಟದಲ್ಲಿ ಎಲ್ಐಸಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ತಂಡದ ಸದಸ್ಯೆ, ಆಳ್ವಾಸ್ ಕಾಲೇಜಿನ ಹಳೆ ವಿದ್ಯಾರ್ಥಿನಿ ಶಿರ್ತಾಡಿಯ ಜಾಯ್ಲಿನ್ ಲೋಬೊ ಅವರು ಲಾಂಗ್ ಜಂಪ್ ಮತ್ತು ಟ್ರಿಬ್ಬಲ್ ಜಂಪ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮೂಲಕ ಚಿನ್ನದ ಪದಕ ಹಾಗೂ 4×100 ಮತ್ತು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ ಗಳಿಸಿ ಗಮನ ಸೆಳೆದರು. ಹೈಜಂಪ್ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ, ಜಾವೆಲಿನ್ ಮತ್ತು ಶಾಟ್ಪುಟ್ ಕ್ರೀಡೆಯಲ್ಲಿ ಶಹೆಜಹಾನಿ ರವರು ಚಿನ್ನದ ಪದಕ ಮತ್ತು 4×100 ರಿಲೇ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಹಿರಿಮೆಗೆ ಪಾತ್ರರಾದರು.
ಇತರ ಕ್ರೀಡಾಪಟುಗಳಾದ ಹರ್ಷಿಣಿ ಅವರು ಹೈಜಂಪ್ನಲ್ಲಿ ಚಿನ್ನ, ಟ್ರಿಪ್ಪಲ್ ಜಂಪ್ ಹಾಗು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ತಂಡದ ಸಾಧನೆಗೆ ಗಣನೀಯ ಕೊಡುಗೆ ನೀಡಿದರು. ಈ ಮೂಲಕ ಎಲ್ ಐಸಿ ತಂಡ ಐದು ವಿಭಾಗಳಲ್ಲಿ ಚಾಂಪಿಯನ್ ಅಗಿ ಹೊರಹೊಮ್ಮಿತು.
ಎಲ್ ಐ ಸಿ ತಂಡವು ಪುರುಷರ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಆಗುವುದರ ಜೊತೆಗೆ ಪುರುಷರ ಫೀಲ್ಡ್ ಮತ್ತು ಟ್ರಾಕ್ ಚಾಂಪಿಯನ್, ಮಹಿಳಾ ಫೀಲ್ಡ್ ಚಾಂಪಿಯನ್ ಪ್ರಶಸ್ತಿಗೂ ಪಾತ್ರವಾಯಿತು.
ಕ್ರೀಡಾಕೂಟದಲ್ಲಿ ಗಣನೀಯ ಸಾಧನೆ ಮಾಡಿದ ತಂಡದ ಸದಸ್ಯರಿಗೆ ಎಲ್ಐಸಿ ಸಂಸ್ಥೆಯು ಅಭಿನಂದಿಸಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…