ಮೂಡುಬಿದಿರೆ : ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಕ್ರೀಡಾಕೂಟದಲ್ಲಿ ಎಲ್ಐಸಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ತಂಡದ ಸದಸ್ಯೆ, ಆಳ್ವಾಸ್ ಕಾಲೇಜಿನ ಹಳೆ ವಿದ್ಯಾರ್ಥಿನಿ ಶಿರ್ತಾಡಿಯ ಜಾಯ್ಲಿನ್ ಲೋಬೊ ಅವರು ಲಾಂಗ್ ಜಂಪ್ ಮತ್ತು ಟ್ರಿಬ್ಬಲ್ ಜಂಪ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮೂಲಕ ಚಿನ್ನದ ಪದಕ ಹಾಗೂ 4×100 ಮತ್ತು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ ಗಳಿಸಿ ಗಮನ ಸೆಳೆದರು. ಹೈಜಂಪ್ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ, ಜಾವೆಲಿನ್ ಮತ್ತು ಶಾಟ್ಪುಟ್ ಕ್ರೀಡೆಯಲ್ಲಿ ಶಹೆಜಹಾನಿ ರವರು ಚಿನ್ನದ ಪದಕ ಮತ್ತು 4×100 ರಿಲೇ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಹಿರಿಮೆಗೆ ಪಾತ್ರರಾದರು.
ಇತರ ಕ್ರೀಡಾಪಟುಗಳಾದ ಹರ್ಷಿಣಿ ಅವರು ಹೈಜಂಪ್ನಲ್ಲಿ ಚಿನ್ನ, ಟ್ರಿಪ್ಪಲ್ ಜಂಪ್ ಹಾಗು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ತಂಡದ ಸಾಧನೆಗೆ ಗಣನೀಯ ಕೊಡುಗೆ ನೀಡಿದರು. ಈ ಮೂಲಕ ಎಲ್ ಐಸಿ ತಂಡ ಐದು ವಿಭಾಗಳಲ್ಲಿ ಚಾಂಪಿಯನ್ ಅಗಿ ಹೊರಹೊಮ್ಮಿತು.
ಎಲ್ ಐ ಸಿ ತಂಡವು ಪುರುಷರ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಆಗುವುದರ ಜೊತೆಗೆ ಪುರುಷರ ಫೀಲ್ಡ್ ಮತ್ತು ಟ್ರಾಕ್ ಚಾಂಪಿಯನ್, ಮಹಿಳಾ ಫೀಲ್ಡ್ ಚಾಂಪಿಯನ್ ಪ್ರಶಸ್ತಿಗೂ ಪಾತ್ರವಾಯಿತು.
ಕ್ರೀಡಾಕೂಟದಲ್ಲಿ ಗಣನೀಯ ಸಾಧನೆ ಮಾಡಿದ ತಂಡದ ಸದಸ್ಯರಿಗೆ ಎಲ್ಐಸಿ ಸಂಸ್ಥೆಯು ಅಭಿನಂದಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…