ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ ಸಂಪ್ಯ ಅಕ್ಷಯ ಕಾಲೇಜು ಬಳಿ ಹೊಸ ಮೋರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು , ಕಾಮಗಾರಿ ನಿರ್ಮಾಣದ ವೇಳೆ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ ನಿರ್ಮಾಣವಾಗಿದೆ. ಹೊಂಡ ಮುಚ್ಚುವಂತೆ ಹೆದ್ದಾರಿ ಇಲಾಖೆಗೆ ಸಾರ್ವಜನಿಕರು ಮನವಿ ಮಾಡಿದ್ದರೂ ಹೊಂಡ ಮುಚ್ಚಿರಲಿಲ್ಲ. ಈ ನಡುವೆ ವಾಹನಗಳು ಅಪಘಾತ ಉಂಟಾಗುವ ಸಂಭವ ಇರುವ ಕಾರಣ ಸಂಪ್ಯ ಬೂತ್ ಅಧ್ಯಕ್ಷರಾದ ಶಾಫಿ ಎಂಬವರು ಶಾಸಕರಿಗೆ ದೂರು ಸಲ್ಲಿಸಿದ್ದರು. ಶಾಸಕರ ಸೂಚನೆಯಂತೆ ರಸ್ತೆ ಮಧ್ಯೆ ಇದ್ದ ಅಪಾಯಕಾರಿ ಹೊಂಡವನ್ನು ಮುಚ್ಚಲು ಹೆದ್ದಾರಿ ಇಲಾಖೆ ಒಪ್ಪಿಕೊಂಡಿದ್ದು ಗುರುವಾರ ಬೆಳಿಗ್ಗೆ ಕೆಲಸವನ್ನು ಆರಂಭಿಸಿದ್ದಾರೆ. ಮೋರಿ ಕಾಮಗಾರಿಯನ್ನು ತುರ್ತಾಗಿ ಮುಗಿಸುವಂತೆಯೂ ಶಾಸಕರು ಸೂಚನೆಯನ್ನು ನೀಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…