ಜನ ಮನದ ನಾಡಿ ಮಿಡಿತ

Advertisement

ಗ್ರೈಂಡರ್ ವಾಹನವೊಂದು ಡಿಕ್ಕಿಯಾಗಿ ಪಾದಚಾರಿಗೆ ಗಾಯ..!!ಆಸ್ಪತ್ರೆಗೆ ದಾಖಲು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಾಡುತ್ತಿದ್ದ ಗ್ರೈಂಡರ್ ವಾಹನವೊಂದು ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಮೆಲ್ಕಾರ್ ಸಮೀಪದ ಬೋಳಂಗಡಿ ಎಂಬಲ್ಲಿ ನಡೆದಿದೆ.

 


ಪಾಣೆಮಂಗಳೂರು ಗ್ರಾಮದ ಬೋಳಂಗಡಿ ನಿವಾಸಿ ಪದ್ಮನಾಭ ಶೆಣೈ ( 76) ಎಂಬವರು ಗಾಯಗೊಂಡವರು.ಬಿಸಿರೋಡು- ಅಡ್ಡ ಹೊಳೆ ವರೆಗೆ ರಾಷ್ಟ್ರೀಯ ಹೆದ್ದಾರಿಯ ಚತುಷ್ಪತ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಕೆ‌ಎನ್.ಆರ್.ಸಿ.ಕಂಪೆನಿ ಗುತ್ತಿಗೆಯ ಮೂಲಕ ಕೆಲಸ ನಿರ್ವಹಿಸುತ್ತಿದೆ.ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ಕಂಪೆನಿಗೆ ಸೇರಿದ ವಾಹನ ಚಾಲಕ ರಾಜಕುಮಾರ ಯಾದವ ಎಂಬಾತ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿಕರಣ ಮಾಡುತ್ತಿದ್ದ TS-36-C -6757 ನೇ ಗ್ರೈಂಡರ್ ವಾಹನವನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಯಾವುದೇ ಸೂಚನೆ ನೀಡದೆ ಏಕಾಏಕಿ ಹಿಮ್ಮುಖವಾಗಿ ಮೆಲ್ಕಾರ್ ಕಡೆಯಿಂದ ಬೋಳಂಗಡಿ ಕಡೆಗೆ ಚಲಾಯಿಸಿಕೊಂಡು ಬಂದು, ಮೆಲ್ಕಾರ್ ಕಡೆಯಿಂದ ಬೋಳಂಗಡಿ ‌ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪದ್ಮನಾಭ ಶೆಣೈಯವರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಪಡಿಸಿದ್ದಾನೆ ಎಂದು ಇವರ ತಮ್ಮನ ಮಗ ಗುರುಪ್ರಸಾದ್ ಅವರು ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ‌.

ಘಟನೆಯಿಂದ ಗಾಯಗೊಂಡ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದು,ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಲವಾರು ಅಪಘಾತ
ಕಾಮಗಾರಿ ಆರಂಭವಾದ ಇಂದಿನವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸುವ ವೇಳೆ ಅನೇಕ ಅಪಘಾತ ಗಳು ನಡೆದಿದ್ದು ಪ್ರಾಣ ಹಾನಿಯಾದ ಘಟನೆಗಳು ಸಂಭವಿಸಿವೆ.
ಕಂಪೆನಿಯ ಬೇಜಾವಬ್ದಾರಿತನದ ಕಾಮಗಾರಿಯಿಂದ ಅನೇಕ ಜೀವಗಳು ಬಲಿಯಾಗಿವೆ. ಕಂಪೆನಿಯ ಚಾಲಕರು ದುಡುಕುತನದಿಂದ ಚಾಲನೆ ಮಾಡುತ್ತಿರುವುದೇ ಘಟನೆಗೆ ಕಾರಣವಾಗುತ್ತಿದೆ ಎಂದು ಹೇಳಲಾಗುತ್ತಿದೆ.ಅದರೂ ಕಂಪೆನಿ ಈ ಬಗ್ಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಅಮಾಯಕ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಅಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!