ಜನ ಮನದ ನಾಡಿ ಮಿಡಿತ

Advertisement

ನ.27ರಂದು ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ, ಮಾರಾಟ

ಉಡುಪಿ: ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾಸ್ ಉಡುಪಿ ಜಿಲ್ಲಾ ಮಹಿಳಾ ಘಟಕ, ಶಿರಡಿ ಸಾಯಿಬಾಬಾ ಮಂದಿರ ಕೊಡವೂರು ಹಾಗೂ ಎಪಿಎಂಸಿ ರಕ್ಷಣಾ ಸಮಿತಿಯ ಸಹಭಾಗಿತ್ವದಲ್ಲಿ ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ ಮಾರಾಟವನ್ನು ಇದೇ ನ. 27ರಂದು ಬೆಳಿಗ್ಗೆ 8.30ರಿಂದ 12.30ರ ವರೆಗೆ ಕೊಡವೂರು ತೋಟದಮನೆಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಮೆಂಡನ್ ತಿಳಿಸಿದರು.


ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪ್ರದಾಯಿಕ ಗೂಡು ದೀಪ ಸ್ಪರ್ಧೆಯ ಮೂಲಕ ನಶಿಸುತ್ತಿರುವ ಗೂಡುದೀಪಗಳಿಗೆ ಮತ್ತೆ ಜೀವ ತುಂಬುವ ಸಲುವಾಗಿ ಹಾಗೂ ಪ್ಲಾಸ್ಟಿಕ್ ಥರ್ಮಕೋಲ್ ಪರಿಸರ ಹಾನಿಯಾಗುತ್ತಿರುವುದಿಂದ ಇದರ ಬಳಕೆ ಮಾಡದಂತೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಉಪಾಧ್ಯಕ್ಷ ವಿಜಯ ಕೊಡವೂರು ಮಾತನಾಡಿ, ಸ್ಪರ್ಧೆಯು 16ವರ್ಷಕ್ಕಿಂತ ಮೇಲ್ಪಟ್ಟ ಸೀನಿಯರ್ ವಿಭಾಗ ಹಾಗೂ 10ನೇ ತರಗತಿಯೊಳಗಿನ ಜೂನಿಯರ್ ವಿಭಾಗದಲ್ಲಿ ನಡೆಯಲಿದ್ದು, ಜೂನಿಯರ್ ವಿಭಾಗದಲ್ಲಿ 16 ವರ್ಷ ಕೆಳಗಿನ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ಸೀನಿಯರ್ ವಿಭಾಗದಲ್ಲಿ ಪ್ರಥಮ 5,555, ದ್ವಿತೀಯ 4,444 ಹಾಗೂ ತೃತೀಯ 3,333 ಮತ್ತು 5 ಜನರಿಗೆ ತಲಾ 1000 ರೂಪಾಯಿಗಳ ಸಮಾಧಾನಕರ ಬಹುಮಾನ ನೀಡಲಾಗುವುದು. ಜೂನಿಯರ್ ವಿಭಾಗದಲ್ಲಿ ಪ್ರಥಮ 4,444, ದ್ವಿತೀಯ 3,333, ತೃತೀಯ 2,222 ಮತ್ತು 5 ಜನರಿಗೆ ತಲಾ 1000 ರೂಪಾಯಿಗಳ ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!