ಉಡುಪಿ: ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾಸ್ ಉಡುಪಿ ಜಿಲ್ಲಾ ಮಹಿಳಾ ಘಟಕ, ಶಿರಡಿ ಸಾಯಿಬಾಬಾ ಮಂದಿರ ಕೊಡವೂರು ಹಾಗೂ ಎಪಿಎಂಸಿ ರಕ್ಷಣಾ ಸಮಿತಿಯ ಸಹಭಾಗಿತ್ವದಲ್ಲಿ ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ ಮಾರಾಟವನ್ನು ಇದೇ ನ. 27ರಂದು ಬೆಳಿಗ್ಗೆ 8.30ರಿಂದ 12.30ರ ವರೆಗೆ ಕೊಡವೂರು ತೋಟದಮನೆಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಮೆಂಡನ್ ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪ್ರದಾಯಿಕ ಗೂಡು ದೀಪ ಸ್ಪರ್ಧೆಯ ಮೂಲಕ ನಶಿಸುತ್ತಿರುವ ಗೂಡುದೀಪಗಳಿಗೆ ಮತ್ತೆ ಜೀವ ತುಂಬುವ ಸಲುವಾಗಿ ಹಾಗೂ ಪ್ಲಾಸ್ಟಿಕ್ ಥರ್ಮಕೋಲ್ ಪರಿಸರ ಹಾನಿಯಾಗುತ್ತಿರುವುದಿಂದ ಇದರ ಬಳಕೆ ಮಾಡದಂತೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಉಪಾಧ್ಯಕ್ಷ ವಿಜಯ ಕೊಡವೂರು ಮಾತನಾಡಿ, ಸ್ಪರ್ಧೆಯು 16ವರ್ಷಕ್ಕಿಂತ ಮೇಲ್ಪಟ್ಟ ಸೀನಿಯರ್ ವಿಭಾಗ ಹಾಗೂ 10ನೇ ತರಗತಿಯೊಳಗಿನ ಜೂನಿಯರ್ ವಿಭಾಗದಲ್ಲಿ ನಡೆಯಲಿದ್ದು, ಜೂನಿಯರ್ ವಿಭಾಗದಲ್ಲಿ 16 ವರ್ಷ ಕೆಳಗಿನ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ಸೀನಿಯರ್ ವಿಭಾಗದಲ್ಲಿ ಪ್ರಥಮ 5,555, ದ್ವಿತೀಯ 4,444 ಹಾಗೂ ತೃತೀಯ 3,333 ಮತ್ತು 5 ಜನರಿಗೆ ತಲಾ 1000 ರೂಪಾಯಿಗಳ ಸಮಾಧಾನಕರ ಬಹುಮಾನ ನೀಡಲಾಗುವುದು. ಜೂನಿಯರ್ ವಿಭಾಗದಲ್ಲಿ ಪ್ರಥಮ 4,444, ದ್ವಿತೀಯ 3,333, ತೃತೀಯ 2,222 ಮತ್ತು 5 ಜನರಿಗೆ ತಲಾ 1000 ರೂಪಾಯಿಗಳ ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…