ಕರಾವಳಿ

ಮಂಗಳೂರು: ದೀಪಾವಳಿ ಹಬ್ಬ ಮುಗಿದ ಬಳಿಕ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲಿಗೆ ಆಗ್ರಹ….!

ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ- ಮಂಗಳೂರಿಗೆ ವಿಶೇಷ ರೈಲು ಸೇವೆ ಒದಗಿಸಲಾಗಿದೆ. ಆದರೆ ಹಬ್ಬ ಮುಗಿಸಿ ವಾಪಸ್ ಬೆಂಗಳೂರಿಗೆ ರೈಲಿನ ಸೇವೆ ಕಲ್ಪಿಸದೇ ಇರುವುದು ಪ್ರಯಾಣಿಕರಿಗೆ ಅನಾನುಕೂಲವಾಗಿದೆ. ಹೀಗಾಗಿ ಹಬ್ಬದ ಬಳಿಕ ವಿಶೇಷ ರೈಲಿನ ವ್ಯವಸ್ಥೆ ಮಾಡುವಂತೆ ಸಾರ್ವಜನಿಕ ವಲಯದಿಂದ ಒತ್ತಾಯ ಕೇಳಿ ಬಂದಿದೆ.

ದಸರಾ ಹಬ್ಬದ ಸಂದರ್ಭ ಬೆಂಗಳೂರು- ಮಂಗಳೂರು ನಡುವೆ ಸಂಚಾರಕ್ಕಾಗಿ ಪ್ರಯಾಣಿಕರು ಪರದಾಟ ಅನುಭವಿಸಿದ ಹಿನ್ನೆಲೆಯಲ್ಲಿ ಸದ್ಯ ದೀಪಾವಳಿ ಹಬ್ಬದ ಸಂದರ್ಭ ಬೆಂಗಳೂರಿನಿಂದ- ಮಂಗಳೂರಿಗೆ ವಿಶೇಷ ರೈಲು ಸೇವೆ ಒದಗಿಸಲಾಗಿದೆ. ಆದರೆ ಹಬ್ಬದ ಮುಗಿದ ನಂತರ ಮಂಗಳೂರಿನಿಂದ ಬೆಂಗಳೂರಿಗೆ ರೈಲು ಕಲ್ಪಿಸದಿರುವುದು ಮತ್ತೆ ಪ್ರಯಾಣಿಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಹಬ್ಬದ ಆರಂಭದ ದಿನದಲ್ಲಿ ಅಂದರೆ ಅ.30 ರಂದು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಲು ವಿಶೇಷ ರೈಲು ಕಲ್ಪಿಸಲಾಗಿದ್ದು ಸ್ವಾಗತಾರ್ಹ. ಆದರೆ ಬಳಿಕ ಮಂಗಳೂರಿನಿಂದ ತೆರಳಲು ರೈಲಿನ ಅವಶ್ಯಕತೆ ಇದ್ದು ಈ ಬಗ್ಗೆ ಚಿಂತಿಸಬೇಕಿದೆ. ಅ.31 ರಿಂದ ನ.3 ರವರೆಗೆ ಸಾಲು ಸಾಲು ರಜೆ ಹಾಗೂ ವೀಕೆಂಡ್‌ ಕೂಡ ಆಗಿರುವುದರಿಂದ ಊರಿಗೆ ಬಂದವರು ತೆರಳಲು ಅವಶ್ಯಕವಾಗಿ ರೈಲು ವ್ಯವಸ್ಥೆ ಆಗಬೇಕಿದೆ. ನ.2 ಹಾಗೂ 3ರಂದು ಬಸ್‌ ದರವೂ ದುಪ್ಪಟ್ಟಾಗಿದ್ದು ಪ್ರಯಾಣಿಕರನ್ನು ಕಂಗಾಲಾಗಿಸಿದೆ.

ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಹಾಗೂ ರೈಲ್ವೆ ಬಳಕೆದಾರರ ಮನವಿ ಬಳಿಕ ನೈರುತ್ಯ ರೈಲ್ವೆಯು ಯಶವಂತಪುರ- ಮಂಗಳೂರು ವಿಶೇಷ ರೈಲು ಅ.30 ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ. ಹಾಗೆಯೇ ಮಂಗಳೂರು- ಯಶವಂತಪುರ ವಿಶೇಷ ರೈಲು ಮಂಗಳೂರಿನಿಂದ ಅ.31ರಂದು ಮಧ್ಯಾಹ್ನ 1 ಗಂಟೆಗೆ ಹೊರಟು ಅದೇ ದಿನ ರಾತ್ರಿ 9.15ಕ್ಕೆ ಯಶವಂತಪುರ ತಲುಪಲಿದೆ.

ದಸರಾ ಹಬ್ಬದ ಸಂದರ್ಭ ಊರಿಗೆ ಬಂದವರು ವಾಪಸ್‌ ಬೆಂಗಳೂರಿಗೆ ತೆರಳಲು ಸಮಸ್ಯೆ ಅನುಭವಿಸಿದ್ದರು. ಮುರುಡೇಶ್ವರ ಎಕ್ಸ್‌ಪ್ರೆಸ್‌ ಹಾಗೂ ಕಣ್ಣೂರು ಎಕ್ಸ್‌ಪ್ರೆಸ್‌ ಭರ್ತಿಯಾಗಿತ್ತು. ಜತೆಗೆ ವಿಶೇಷ ರೈಲು ಸೇವೆಯೂ ಇರಲಿಲ್ಲ. ಇನ್ನು ಬಸ್‌ ದರವಂತೂ ದುಪ್ಪಟ್ಟಾಗಿತ್ತು. ಕೆಲವರು 2 ಸಾವಿರದಿಂದ 3,500 ರೂ. ವರೆಗೆ ಟಿಕೆಟ್‌ ಪಾವತಿಸಿ ತೆರಳಿದ್ದರು. ಮಂಗಳೂರು- ಬೆಂಗಳೂರು ಹೋಗಿ ಬರಲು ಒಬ್ಬರಿಗೆ 5 ರಿಂದ 6 ಸಾವಿರ ಪಾವತಿಸಬೇಕಿತ್ತು. ಇನ್ನು ಧಾರ್ಮಿಕ ಕ್ಷೇತ್ರಗಳಿಗೆ ಬರುವವರಿಗೂ ಸಮಸ್ಯೆಯಾಗಿತ್ತು. ದೀಪಾವಳಿ ಹಬ್ಬದ ಸಂದರ್ಭ ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಬರುವವರು ಹಾಗೂ ತೆರಳುವವರ ಸಂಖ್ಯೆ ಹೆಚ್ಚಳವಾಗುವುದು ಸಹಜ. ಆದ್ದರಿಂದ ಈಗಾಗಲೇ ಬೆಂಗಳೂರಿನಿಂದ ಮಂಗಳೂರಿಗೆ ವಿಶೇಷ ರೈಲು ಒದಗಿಸಿರುವುದು ಖುಷಿಯ ಸಂಗತಿ. ಆದರೆ ಊರಿಗೆ ಬಂದವರು ಮರಳಿ ಹೋಗೋದು ಹೇಗೆ ಎಂಬುದೇ ಸಮಸ್ಯೆ. ಆದ್ದರಿಂದ ಮಂಗಳೂರಿನಿಂದ ತೆರಳಲು ಕೂಡ ವಿಶೇಷ ರೈಲಿನ ವ್ಯವಸ್ಥೆಯನ್ನು ಇಲಾಖೆ ಕಲ್ಪಿಸಬೇಕಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

3 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

3 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

3 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

8 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

8 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago