ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ ಯುಗಪುರುಷದಲ್ಲಿ ಗೂಡುದೀಪ ಸ್ಪರ್ಧೆ

ಕಿನ್ನಿಗೋಳಿಯ ಯುಗಪುರುಷದ ನೇತೃತ್ವದಲ್ಲಿ ಕಿನ್ನಿಗೋಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.), ಭ್ರಾಮರೀ ಮಹಿಳಾ ಸಮಾಜ (ರಿ.) ಮೆನ್ನಬೆಟ್ಟು, ಲಯನ್ಸ್ ಹಾಗೂ ಲಿಯೋ ಕ್ಲಬ್, ರೋಟರಿ ಕ್ಲಬ್, ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.), ಯಕ್ಷಲಹರಿ (ರಿ.), ವಿಜಯಾ ಕಲಾವಿದರು, ಕರ್ನಾಟಕ ಸ್ಟೇಟ್ ಟೈಲರ್‍ಸ್ ಅಸೋಸಿಯೇಶನ್ ಕಿನ್ನಿಗೋಳಿ ವಲಯ, ಸೌತ್ ಕೆನರಾ ಫೋಟೋಗ್ರಾಫರ್‍ಸ್ ಅಸೋಸಿಯೇಶನ್ ಮೂಲ್ಕಿ ವಲಯ ಹಾಗೂ ಲಯನ್ಸ್ ಕ್ಲಬ್ ಬಪ್ಪನಾಡು ಇನ್‌ಸ್ಪಾಯರ್ ಸಂಸ್ಥೆಗಳ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಇದೇ ಅಕ್ಟೋಬರ್  31ರಂದು ಗುರುವಾರ ಸಾಯಂ. ಗಂಟೆ 3ಕ್ಕೆ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜರಗಲಿದೆ.

ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಮಧ್ಯಾಹ್ನ ಗಂಟೆ 3ಕ್ಕೆ ಗೂಡುದೀಪ ಪ್ರದರ್ಶಿಸಬೇಕು. ಸಾಂಪ್ರದಾಯಿಕ ಹಾಗೂ ಆಧುನಿಕ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಅಂತೆಯೇ ಭಾಗವಹಿಸುವವರಿಗೆ ನಗದು ಹಾಗೂ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಯುಗಪುರುಷದ ಕೊಡೆತ್ತೂರು ಭುವನಾಭಿರಾಮ ಉಡುಪರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!