ಮಂಗಳೂರು: ವಿಧಾನಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆ್ಯ ಮತಗಳ ಎಣಿಕೆ ಇಂದು ಆರಂಭಗೊಂಡಿದೆ. ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ.
ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ ಗೆ 33 ರಂತೆ ಹಂಚಿಕೆ ಮಾಡಲಾಗುತ್ತದೆ.
ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ.
ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುವುದು.
ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…