ಜನ ಮನದ ನಾಡಿ ಮಿಡಿತ

Advertisement

ಪುಣ್ಯಕೋಟಿ ನಗರದ ಶಾಲಾ ಆವರಣದ ಹತ್ತಿರದಲ್ಲೇ ಬಾರ್ & ರೆಸ್ಟೋರೆಂಟ್; ಮಳೆಯನ್ನು ಲೆಕ್ಕಿಸದೆ ವಿದ್ಯಾರ್ಥಿಗಳ ಹೋರಾಟ

ಉಳ್ಳಾಲ : ಶಾಲೆಯ ಬಳಿ ಬಾರ್‌ ತೆರೆಯುವುದು ಕಾನೂನುಬಾಹಿರ. ಶಿಕ್ಷಣ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಮದ್ಯದ ಅಂಗಡಿಗಳನ್ನು ನಡೆಸಬಾರದು ಎಂದು ನಿಯಮವಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪುವಿನ ಬಾಳೆ ಪುಣಿ ಗ್ರಾಮದ ಪುಣ್ಯಕೋಟಿ ನಗರದಲ್ಲಿ ಶಾಲಾ ಆವರಣದ ಹತ್ತಿರದಲ್ಲೇ ಬಾರ್ & ರೆಸ್ಟೋರೆಂಟ್ ಒಂದು ಆರಂಭವಾಗಿದೆ. ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ ಹಿನ್ನಲೆ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದ ಘಟನೆ ನಡೆದಿದೆ.


ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ ಬಳಿಯಲ್ಲೇ ಬಾರ್‌ ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ಇದೀಗ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಮಳೆಯ ನಡುವೆಯು ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಯಮಗಳನ್ನು ಗಾಳಿಗೆ ತೂರಿದ ಬಾರ್ ಗೆ ಸ್ಥಳೀಯ ಪಂಚಾಯತ್ ಆಡಳಿತವು ನಿರಾಕ್ಷೇಪಣಾ ಪತ್ರ ನೀಡಿರುವುದಾಗಿ ಆರೋಪಗಳು ಕೇಳಿಬಂದಿವೆ. ಬಾರ್ ಅನ್ನು ಕೂಡಲೇ ಸ್ಥಳಾಂತರಿಸುವಂತೆ ಆಗ್ರಹಿಸಿ ಶಾರದಾ ವಿದ್ಯಾಗಣಪತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬಾಳೆಪುಣಿ ಪಂಚಾಯತ್ ಗೆ ಮುತ್ತಿಗೆ ಹಾಕಿ ಪಂಚಾಯತ್ ಅಧ್ಯಕ್ಷೆ ರಝಿಯಾ ಅವರಿಗೆ ಮನವಿ ಸಲ್ಲಿಸಿದರು. ಬಾರ್‌ ಅಂಡ್‌ ರಸ್ಟೋರೆಂಟ್‌ ನ್ನು ಮುಚ್ಚುವರೆಗೂ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಭಟ್ ಹೇಳಿದರು.


ಶಾಲಾ ವಿದ್ಯಾರ್ಥಿನಿ ರಶ್ಮಿತ ಮಾತನಾಡಿ, ಶಾಲೆಯ ಆವರಣದ ಸುತ್ತಮುತ್ತಲಿನಲ್ಲಿ ಬಾರ್ ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾದರೂ ನಡೆಯುತ್ತಿರುವ ಮಾರಾಟ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ಆದಷ್ಟು ಬೇಗ ಸರಿಪಡಿಸಿ ಓದುತ್ತಿರುವ ಮಕ್ಕಳಿಗೆ ಸಹಾಯ ಮಾಡಬೇಕೆಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!