ಉಳ್ಳಾಲ : ಶಾಲೆಯ ಬಳಿ ಬಾರ್ ತೆರೆಯುವುದು ಕಾನೂನುಬಾಹಿರ. ಶಿಕ್ಷಣ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಮದ್ಯದ ಅಂಗಡಿಗಳನ್ನು ನಡೆಸಬಾರದು ಎಂದು ನಿಯಮವಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪುವಿನ ಬಾಳೆ ಪುಣಿ ಗ್ರಾಮದ ಪುಣ್ಯಕೋಟಿ ನಗರದಲ್ಲಿ ಶಾಲಾ ಆವರಣದ ಹತ್ತಿರದಲ್ಲೇ ಬಾರ್ & ರೆಸ್ಟೋರೆಂಟ್ ಒಂದು ಆರಂಭವಾಗಿದೆ. ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ ಹಿನ್ನಲೆ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದ ಘಟನೆ ನಡೆದಿದೆ.
ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ ಬಳಿಯಲ್ಲೇ ಬಾರ್ ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ಇದೀಗ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಮಳೆಯ ನಡುವೆಯು ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಯಮಗಳನ್ನು ಗಾಳಿಗೆ ತೂರಿದ ಬಾರ್ ಗೆ ಸ್ಥಳೀಯ ಪಂಚಾಯತ್ ಆಡಳಿತವು ನಿರಾಕ್ಷೇಪಣಾ ಪತ್ರ ನೀಡಿರುವುದಾಗಿ ಆರೋಪಗಳು ಕೇಳಿಬಂದಿವೆ. ಬಾರ್ ಅನ್ನು ಕೂಡಲೇ ಸ್ಥಳಾಂತರಿಸುವಂತೆ ಆಗ್ರಹಿಸಿ ಶಾರದಾ ವಿದ್ಯಾಗಣಪತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬಾಳೆಪುಣಿ ಪಂಚಾಯತ್ ಗೆ ಮುತ್ತಿಗೆ ಹಾಕಿ ಪಂಚಾಯತ್ ಅಧ್ಯಕ್ಷೆ ರಝಿಯಾ ಅವರಿಗೆ ಮನವಿ ಸಲ್ಲಿಸಿದರು. ಬಾರ್ ಅಂಡ್ ರಸ್ಟೋರೆಂಟ್ ನ್ನು ಮುಚ್ಚುವರೆಗೂ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಭಟ್ ಹೇಳಿದರು.
ಶಾಲಾ ವಿದ್ಯಾರ್ಥಿನಿ ರಶ್ಮಿತ ಮಾತನಾಡಿ, ಶಾಲೆಯ ಆವರಣದ ಸುತ್ತಮುತ್ತಲಿನಲ್ಲಿ ಬಾರ್ ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾದರೂ ನಡೆಯುತ್ತಿರುವ ಮಾರಾಟ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ಆದಷ್ಟು ಬೇಗ ಸರಿಪಡಿಸಿ ಓದುತ್ತಿರುವ ಮಕ್ಕಳಿಗೆ ಸಹಾಯ ಮಾಡಬೇಕೆಂದು ಮನವಿ ಮಾಡಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…