ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳ ಸಾಗಾಟ: ಪ್ರಕರಣ ದಾಖಲು..!

ಮಂಗಳೂರಿನ ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಲ್ಲಿ ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳನ್ನು ಕಡಿದು ಸಾಗಿಸಿರುವ ಕುರಿತು ರಾಷ್ಟ್ರೀಯ ಪರಿಸರ ಸಂರಕ್ಷಣ ಒಕ್ಕೂಟ(ಎನ್‌ಇಸಿಎಫ್‌) ನೀಡಿದ ದೂರಿನಂತೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.

 


ನಿರೀಕ್ಷಣ ಮಂದಿರಕ್ಕೆ ಅಪಾಯವಿದೆ ಎಂದು ಹೇಳಿ ಲೋಕೋಪಯೋಗಿ ಇಲಾಖೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ 3 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರ ಕಡಿಯಲು ಅನುಮತಿ ನೀಡಲಾಗಿತ್ತು. ಆದರೆ ಇಲಾಖೆಯ ಅನುಮತಿ ಇಲ್ಲದೆ ದೇವದಾರು ಮರವನ್ನು ಸ್ಥಳದಿಂದ ಸಾಗಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮರ ಕಡಿಯಲು ಗುತ್ತಿಗೆ ಪಡೆದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮರ ಕಡಿಯುತ್ತಿರುವುದು ಎನ್‌ಇಸಿಎಫ್‌ ಸದಸ್ಯರೊಬ್ಬರ ಗಮನಕ್ಕೆ ಬಂದಿದ್ದು, ಮಂಗಳವಾರ ವಾಹನದಲ್ಲಿ ಮರ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರ ದಳಕ್ಕೆ ಮಾಹಿತಿ ನೀಡಿದ್ದಾರೆ. ಮರ ಸಾಗಾಟದ ವಾಹನ ಹೊಯ್ಗೆ ಬಜಾರ್‌ನ ಇಲಾಖಾ ನಾಟ ಸಂಗ್ರಹಾಲಯದಲ್ಲಿರುವುದು ಪತ್ತೆಯಾಗಿದೆ. ವಾಹನವನ್ನು ಪರಿಶೀಲಿ ಸಿದಾಗ ಅದರಲ್ಲಿ ದೇವದಾರು ಜಾತಿಯ ಮರದ ಕಟ್ಟಿಗೆ ಇರುವುದು ಕಂಡು ಬಂದಿದೆ. ಚಾಲಕನಲ್ಲಿ ವಿಚಾರಿಸಿದಾಗ ಮರ ಸಾಗಾಟಕ್ಕೆ ಪರವಾನಿಗೆ ಇಲ್ಲ ಎಂದು ತಿಳಿಸಿದ್ದಾನೆ. ಅರಣ್ಯ ಸಂಚಾರಿ ದಳ ಅಧಿಕಾರಿಗಳು ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರಕ್ಕೆ ಭೇಟಿ ನೀಡಿದಾಗ 4 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರಗಳನ್ನು ಕಡಿದಿರುವುದು ಕಂಡು ಬಂದಿದೆ. ವಿವಿಧ ಅಳತೆಯ 24 ಸಾಗುವಾನಿ ದಿಮ್ಮಿಗಳನ್ನು ದಾಸ್ತಾನು ಇರಿಸಿರುವುದು ಕಂಡು ಬಂದಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!