ಜನ ಮನದ ನಾಡಿ ಮಿಡಿತ

Advertisement

ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳ ಸಾಗಾಟ: ಪ್ರಕರಣ ದಾಖಲು..!

ಮಂಗಳೂರಿನ ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಲ್ಲಿ ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳನ್ನು ಕಡಿದು ಸಾಗಿಸಿರುವ ಕುರಿತು ರಾಷ್ಟ್ರೀಯ ಪರಿಸರ ಸಂರಕ್ಷಣ ಒಕ್ಕೂಟ(ಎನ್‌ಇಸಿಎಫ್‌) ನೀಡಿದ ದೂರಿನಂತೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.

 


ನಿರೀಕ್ಷಣ ಮಂದಿರಕ್ಕೆ ಅಪಾಯವಿದೆ ಎಂದು ಹೇಳಿ ಲೋಕೋಪಯೋಗಿ ಇಲಾಖೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ 3 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರ ಕಡಿಯಲು ಅನುಮತಿ ನೀಡಲಾಗಿತ್ತು. ಆದರೆ ಇಲಾಖೆಯ ಅನುಮತಿ ಇಲ್ಲದೆ ದೇವದಾರು ಮರವನ್ನು ಸ್ಥಳದಿಂದ ಸಾಗಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮರ ಕಡಿಯಲು ಗುತ್ತಿಗೆ ಪಡೆದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮರ ಕಡಿಯುತ್ತಿರುವುದು ಎನ್‌ಇಸಿಎಫ್‌ ಸದಸ್ಯರೊಬ್ಬರ ಗಮನಕ್ಕೆ ಬಂದಿದ್ದು, ಮಂಗಳವಾರ ವಾಹನದಲ್ಲಿ ಮರ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರ ದಳಕ್ಕೆ ಮಾಹಿತಿ ನೀಡಿದ್ದಾರೆ. ಮರ ಸಾಗಾಟದ ವಾಹನ ಹೊಯ್ಗೆ ಬಜಾರ್‌ನ ಇಲಾಖಾ ನಾಟ ಸಂಗ್ರಹಾಲಯದಲ್ಲಿರುವುದು ಪತ್ತೆಯಾಗಿದೆ. ವಾಹನವನ್ನು ಪರಿಶೀಲಿ ಸಿದಾಗ ಅದರಲ್ಲಿ ದೇವದಾರು ಜಾತಿಯ ಮರದ ಕಟ್ಟಿಗೆ ಇರುವುದು ಕಂಡು ಬಂದಿದೆ. ಚಾಲಕನಲ್ಲಿ ವಿಚಾರಿಸಿದಾಗ ಮರ ಸಾಗಾಟಕ್ಕೆ ಪರವಾನಿಗೆ ಇಲ್ಲ ಎಂದು ತಿಳಿಸಿದ್ದಾನೆ. ಅರಣ್ಯ ಸಂಚಾರಿ ದಳ ಅಧಿಕಾರಿಗಳು ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರಕ್ಕೆ ಭೇಟಿ ನೀಡಿದಾಗ 4 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರಗಳನ್ನು ಕಡಿದಿರುವುದು ಕಂಡು ಬಂದಿದೆ. ವಿವಿಧ ಅಳತೆಯ 24 ಸಾಗುವಾನಿ ದಿಮ್ಮಿಗಳನ್ನು ದಾಸ್ತಾನು ಇರಿಸಿರುವುದು ಕಂಡು ಬಂದಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!