ಮಂಗಳೂರಿನ ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಲ್ಲಿ ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳನ್ನು ಕಡಿದು ಸಾಗಿಸಿರುವ ಕುರಿತು ರಾಷ್ಟ್ರೀಯ ಪರಿಸರ ಸಂರಕ್ಷಣ ಒಕ್ಕೂಟ(ಎನ್ಇಸಿಎಫ್) ನೀಡಿದ ದೂರಿನಂತೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.
ನಿರೀಕ್ಷಣ ಮಂದಿರಕ್ಕೆ ಅಪಾಯವಿದೆ ಎಂದು ಹೇಳಿ ಲೋಕೋಪಯೋಗಿ ಇಲಾಖೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ 3 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರ ಕಡಿಯಲು ಅನುಮತಿ ನೀಡಲಾಗಿತ್ತು. ಆದರೆ ಇಲಾಖೆಯ ಅನುಮತಿ ಇಲ್ಲದೆ ದೇವದಾರು ಮರವನ್ನು ಸ್ಥಳದಿಂದ ಸಾಗಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮರ ಕಡಿಯಲು ಗುತ್ತಿಗೆ ಪಡೆದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮರ ಕಡಿಯುತ್ತಿರುವುದು ಎನ್ಇಸಿಎಫ್ ಸದಸ್ಯರೊಬ್ಬರ ಗಮನಕ್ಕೆ ಬಂದಿದ್ದು, ಮಂಗಳವಾರ ವಾಹನದಲ್ಲಿ ಮರ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರ ದಳಕ್ಕೆ ಮಾಹಿತಿ ನೀಡಿದ್ದಾರೆ. ಮರ ಸಾಗಾಟದ ವಾಹನ ಹೊಯ್ಗೆ ಬಜಾರ್ನ ಇಲಾಖಾ ನಾಟ ಸಂಗ್ರಹಾಲಯದಲ್ಲಿರುವುದು ಪತ್ತೆಯಾಗಿದೆ. ವಾಹನವನ್ನು ಪರಿಶೀಲಿ ಸಿದಾಗ ಅದರಲ್ಲಿ ದೇವದಾರು ಜಾತಿಯ ಮರದ ಕಟ್ಟಿಗೆ ಇರುವುದು ಕಂಡು ಬಂದಿದೆ. ಚಾಲಕನಲ್ಲಿ ವಿಚಾರಿಸಿದಾಗ ಮರ ಸಾಗಾಟಕ್ಕೆ ಪರವಾನಿಗೆ ಇಲ್ಲ ಎಂದು ತಿಳಿಸಿದ್ದಾನೆ. ಅರಣ್ಯ ಸಂಚಾರಿ ದಳ ಅಧಿಕಾರಿಗಳು ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರಕ್ಕೆ ಭೇಟಿ ನೀಡಿದಾಗ 4 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರಗಳನ್ನು ಕಡಿದಿರುವುದು ಕಂಡು ಬಂದಿದೆ. ವಿವಿಧ ಅಳತೆಯ 24 ಸಾಗುವಾನಿ ದಿಮ್ಮಿಗಳನ್ನು ದಾಸ್ತಾನು ಇರಿಸಿರುವುದು ಕಂಡು ಬಂದಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…