ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ನಾದಸ್ವರ ವಾದಕ ನಾಗೇಶ್ ಬಪ್ಪನಾಡು ರವರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ ಅಭಿನಂದನೆ

ಮುಲ್ಕಿ: ಖ್ಯಾತ ನಾದಸ್ವರ ವಾದಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಿದ್ವಾನ್‌ ನಾಗೇಶ್‌ ಬಪ್ಪನಾಡು ರವರಿಗೆ ಆಕಾಶವಾಣಿ ನವದೆಹಲಿ ಉನ್ನತ ಶ್ರೇಣಿಯ ಕಲಾವಿದ (ಟಾಪ್ ಗ್ರೇಡ್) ಮಾನ್ಯತೆ ನೀಡಿರುವುದನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸ್ವಾಗತಿಸಿದ್ದು ಅವರನ್ನು ಅಭಿನಂದಿಸಿದ್ದಾರೆ.

ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಾದಸ್ವರದ ಮೂಲಕ ಕಲೆಯನ್ನು ಆರಾಧಿಸಿಕೊಂಡು ಬರುತ್ತಿದ್ದು ಜನಮನ್ನಣೆ ಗಳಿಸಿದ್ದಾರೆ. ಅವರ ಕಲೆಯ ಆರಾಧನೆ ನಿರಂತರವಾಗಿ ನಡೆದು ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಪ್ರಶಸ್ತಿಗಳು ಲಭಿಸಲಿ ಎಂದು ಹಾರೈಸಿದ್ದಾರೆ.

ನಾದಸ್ವರ ವಾದಕ ನಾಗೇಶ್ ಬಪ್ಪನಾಡು ರವರನ್ನು ಮುಲ್ಕಿ ಸೀಮೆ ಅರಸರು ಹಾಗೂ ಶ್ರೀ ಬಪ್ಪನಾಡು ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ,
ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಾರ್ನಾಡ್ ಹರಿಹರ ಕ್ಷೇತ್ರದ ಆಡಳಿತ ಮೊಕ್ತೇಸರ ಅರವಿಂದ ಪೂಂಜಾ, ಗೋಪಾಲಕೃಷ್ಣ ಭಟ್ ಬಪ್ಪನಾಡು, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ,ಮುಲ್ಕಿ ನ ಪಂ ಅಧ್ಯಕ್ಷ ಸತೀಶ್ ಅಂಚನ್, ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಸದಸ್ಯರಾದ ಪುತ್ತು ಬಾವ ,ಬಾಲಚಂದ್ರ ಕಾಮತ್, ಹರ್ಷರಾಜ ಶೆಟ್ಟಿ, ಸುಭಾಷ್ ಶೆಟ್ಟಿ, ಡಾ. ಹರಿಶ್ಚಂದ್ರ ಪಿ ಸಾಲ್ಯಾನ್,ಉದ್ಯಮಿ ವಾಸು ಪೂಜಾರಿ ಚಿತ್ರಾಪು, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ರಂಗ ಕರ್ಮಿ ಚಂದ್ರಶೇಖರ ಸುವರ್ಣ ಮುಲ್ಕಿ, ಶಿವಶಂಕರ್ ವರ್ಮ
ಉದಯಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ, ಮತ್ತಿತರರು ಅಭಿನಂದಿಸಿದ್ದಾರೆ.
ಮೊದಲ ಬಾರಿಗೆ ನಾದಸ್ವರ ಕಲಾವಿದರಿಗೆ ಈ ಮಾನ್ಯತೆ ಲಭಿಸಿದೆ. ತಂದೆ ಅಣ್ಣು ಶೇರಿಗಾರ ಮತ್ತು ಸುಪ್ರಸಿದ್ಧ ನಾದಸ್ವರ ವಾದಕ ಕಿವುಳೂರು ಎನ್.ಜಿ ಗಣೇಶನ್ ಅವರಿಂದ ನಾದಸ್ವರ ಶಿಕ್ಷಣ ಪಡೆದಿರುವ ನಾಗೇಶ್ ಅವರಿಗೆ ಕರ್ನಾಟಕ ರಾಜ್ಯೋತ್ಸವ, ತಮಿಳುನಾಡು ಮುಖ್ಯಮಂತ್ರಿ ಯವರಿಂದ ನಾದಸ್ವರ ಸೆಲ್ವಂ ಮುಂತಾದ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!