ಮುಲ್ಕಿ: ಖ್ಯಾತ ನಾದಸ್ವರ ವಾದಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಿದ್ವಾನ್ ನಾಗೇಶ್ ಬಪ್ಪನಾಡು ರವರಿಗೆ ಆಕಾಶವಾಣಿ ನವದೆಹಲಿ ಉನ್ನತ ಶ್ರೇಣಿಯ ಕಲಾವಿದ (ಟಾಪ್ ಗ್ರೇಡ್) ಮಾನ್ಯತೆ ನೀಡಿರುವುದನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸ್ವಾಗತಿಸಿದ್ದು ಅವರನ್ನು ಅಭಿನಂದಿಸಿದ್ದಾರೆ.
ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಾದಸ್ವರದ ಮೂಲಕ ಕಲೆಯನ್ನು ಆರಾಧಿಸಿಕೊಂಡು ಬರುತ್ತಿದ್ದು ಜನಮನ್ನಣೆ ಗಳಿಸಿದ್ದಾರೆ. ಅವರ ಕಲೆಯ ಆರಾಧನೆ ನಿರಂತರವಾಗಿ ನಡೆದು ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಪ್ರಶಸ್ತಿಗಳು ಲಭಿಸಲಿ ಎಂದು ಹಾರೈಸಿದ್ದಾರೆ.
ನಾದಸ್ವರ ವಾದಕ ನಾಗೇಶ್ ಬಪ್ಪನಾಡು ರವರನ್ನು ಮುಲ್ಕಿ ಸೀಮೆ ಅರಸರು ಹಾಗೂ ಶ್ರೀ ಬಪ್ಪನಾಡು ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ,
ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಾರ್ನಾಡ್ ಹರಿಹರ ಕ್ಷೇತ್ರದ ಆಡಳಿತ ಮೊಕ್ತೇಸರ ಅರವಿಂದ ಪೂಂಜಾ, ಗೋಪಾಲಕೃಷ್ಣ ಭಟ್ ಬಪ್ಪನಾಡು, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ,ಮುಲ್ಕಿ ನ ಪಂ ಅಧ್ಯಕ್ಷ ಸತೀಶ್ ಅಂಚನ್, ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಸದಸ್ಯರಾದ ಪುತ್ತು ಬಾವ ,ಬಾಲಚಂದ್ರ ಕಾಮತ್, ಹರ್ಷರಾಜ ಶೆಟ್ಟಿ, ಸುಭಾಷ್ ಶೆಟ್ಟಿ, ಡಾ. ಹರಿಶ್ಚಂದ್ರ ಪಿ ಸಾಲ್ಯಾನ್,ಉದ್ಯಮಿ ವಾಸು ಪೂಜಾರಿ ಚಿತ್ರಾಪು, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ರಂಗ ಕರ್ಮಿ ಚಂದ್ರಶೇಖರ ಸುವರ್ಣ ಮುಲ್ಕಿ, ಶಿವಶಂಕರ್ ವರ್ಮ
ಉದಯಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ, ಮತ್ತಿತರರು ಅಭಿನಂದಿಸಿದ್ದಾರೆ.
ಮೊದಲ ಬಾರಿಗೆ ನಾದಸ್ವರ ಕಲಾವಿದರಿಗೆ ಈ ಮಾನ್ಯತೆ ಲಭಿಸಿದೆ. ತಂದೆ ಅಣ್ಣು ಶೇರಿಗಾರ ಮತ್ತು ಸುಪ್ರಸಿದ್ಧ ನಾದಸ್ವರ ವಾದಕ ಕಿವುಳೂರು ಎನ್.ಜಿ ಗಣೇಶನ್ ಅವರಿಂದ ನಾದಸ್ವರ ಶಿಕ್ಷಣ ಪಡೆದಿರುವ ನಾಗೇಶ್ ಅವರಿಗೆ ಕರ್ನಾಟಕ ರಾಜ್ಯೋತ್ಸವ, ತಮಿಳುನಾಡು ಮುಖ್ಯಮಂತ್ರಿ ಯವರಿಂದ ನಾದಸ್ವರ ಸೆಲ್ವಂ ಮುಂತಾದ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…