ಮೂಡುಬಿದಿರೆ : ರಿಕ್ಷಾದಲ್ಲಿ ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಭಜರಂಗದಳ ಕಾರ್ಯಕರ್ತರು ಕಾರ್ಯಚರಣೆ ನಡೆಸಿ ಗೋವುಗಳನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಅಳಿಯೂರಿನಲ್ಲಿ ನಡೆದಿದೆ.
ಮೂಡುಬಿದಿರೆ ತಾಲೂಕಿನ ಅಳಿಯೂರು ಎಂಬಲ್ಲಿ ಅತಿವೇಗವಾಗಿ ಓಡುತ್ತಿದ್ದ ರಿಕ್ಷಾವನ್ನು ಕಂಡು ಸಾರ್ವಜನಿಕರಿಗೆ ಸಂಶಯ ಮೂಡಿದ್ದು ಕೂಡಲೇ ಭಜರಂಗದಳ ಕಾರ್ಯಕರ್ತರಿಗೆ ವಿಷಯ ಮುಟ್ಟಿಸಿದ್ದಾರೆ.
ಅಳಿಯೂರು ಸುಮಂಗಲಿ ಸಭಾ ಭವನದ ಮುಂಭಾಗದಲ್ಲಿ ಆಟೋರಿಕ್ಷಾ ತಡೆದಾಗ ಅದರಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಗೋವು ಪತ್ತೆಯಾಗಿದೆ. ಕೂಡಲೇ ರಿಕ್ಷಾದಲ್ಲಿದ್ದ ಇಬ್ಬರು ಅಲ್ಲಿಂದ ಪರಾರಿಯಾಗಿದ್ದು ಜಲಲುದ್ದೀನ್ ಎಂಬಾತನನ್ನು ತಡೆದು ನಿಲ್ಲಿಸಿ ಪೊಲೀಸರಿಗೆ ಒಪ್ಪಿಸಿದರು.
ಪಣಪಿಲ ಗುಡ್ಡಲಪಕ್ಕೆಯ ಕಂಬಳ ಓಟಗಾರ ದೀಕ್ಷಿತ್ ಎಂಬಾತ ಅಕ್ರಮವಾಗಿ ಗೋವನ್ನು ಮಾರಾಟ ಮಾಡಿದ್ದಾನೆ ಎಂದು ಜಲಲುದ್ದೀನ್ ಹೇಳಿಕೆ ನೀಡಿದ್ದು ಪೊಲೀಸರು ದೀಕ್ಷಿತ್ ಬಂಧನಕ್ಕೆ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.
ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಅರುಣ್ ಕುಮಾರ್ ಶೆಟ್ಟಿ ಸ್ಥಳಕ್ಕೆ ಆಗಮಿಸಿ ಭಜರಂಗದಳ ಕಾರ್ಯಕರ್ತರಿಗೆ ಬೆಂಬಲ ಸೂಚಿಸಿದ್ದಾರೆ. ಗೋವಿನ ಸ್ಥಿತಿ ಕಂಡು ಆಕ್ರೋಶ ವ್ಯಕ್ತಪಡಿಸಿದ ಅವರು ಪರಾರಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಲ್ಲಿ ಕೋರಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…