ಮೂಡುಬಿದಿರೆ : ರಿಕ್ಷಾದಲ್ಲಿ ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಭಜರಂಗದಳ ಕಾರ್ಯಕರ್ತರು ಕಾರ್ಯಚರಣೆ ನಡೆಸಿ ಗೋವುಗಳನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಅಳಿಯೂರಿನಲ್ಲಿ ನಡೆದಿದೆ.
ಮೂಡುಬಿದಿರೆ ತಾಲೂಕಿನ ಅಳಿಯೂರು ಎಂಬಲ್ಲಿ ಅತಿವೇಗವಾಗಿ ಓಡುತ್ತಿದ್ದ ರಿಕ್ಷಾವನ್ನು ಕಂಡು ಸಾರ್ವಜನಿಕರಿಗೆ ಸಂಶಯ ಮೂಡಿದ್ದು ಕೂಡಲೇ ಭಜರಂಗದಳ ಕಾರ್ಯಕರ್ತರಿಗೆ ವಿಷಯ ಮುಟ್ಟಿಸಿದ್ದಾರೆ.
ಅಳಿಯೂರು ಸುಮಂಗಲಿ ಸಭಾ ಭವನದ ಮುಂಭಾಗದಲ್ಲಿ ಆಟೋರಿಕ್ಷಾ ತಡೆದಾಗ ಅದರಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಗೋವು ಪತ್ತೆಯಾಗಿದೆ. ಕೂಡಲೇ ರಿಕ್ಷಾದಲ್ಲಿದ್ದ ಇಬ್ಬರು ಅಲ್ಲಿಂದ ಪರಾರಿಯಾಗಿದ್ದು ಜಲಲುದ್ದೀನ್ ಎಂಬಾತನನ್ನು ತಡೆದು ನಿಲ್ಲಿಸಿ ಪೊಲೀಸರಿಗೆ ಒಪ್ಪಿಸಿದರು.
ಪಣಪಿಲ ಗುಡ್ಡಲಪಕ್ಕೆಯ ಕಂಬಳ ಓಟಗಾರ ದೀಕ್ಷಿತ್ ಎಂಬಾತ ಅಕ್ರಮವಾಗಿ ಗೋವನ್ನು ಮಾರಾಟ ಮಾಡಿದ್ದಾನೆ ಎಂದು ಜಲಲುದ್ದೀನ್ ಹೇಳಿಕೆ ನೀಡಿದ್ದು ಪೊಲೀಸರು ದೀಕ್ಷಿತ್ ಬಂಧನಕ್ಕೆ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.
ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಅರುಣ್ ಕುಮಾರ್ ಶೆಟ್ಟಿ ಸ್ಥಳಕ್ಕೆ ಆಗಮಿಸಿ ಭಜರಂಗದಳ ಕಾರ್ಯಕರ್ತರಿಗೆ ಬೆಂಬಲ ಸೂಚಿಸಿದ್ದಾರೆ. ಗೋವಿನ ಸ್ಥಿತಿ ಕಂಡು ಆಕ್ರೋಶ ವ್ಯಕ್ತಪಡಿಸಿದ ಅವರು ಪರಾರಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಲ್ಲಿ ಕೋರಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…