ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ ಹಸ್ತಾಂತರಗೊಂಡಿತು.
ಉದ್ಯಮಿ ಬಿ.ರಘುನಾಥ ಸೋಮಯಾಜಿ ಕೊಡುಗೆ ನೀಡಿದ ಈ ಮನೆಯನ್ನು ಸರಪಾಡಿ ಗ್ರಾಮದ ಮಠದಬೆಟ್ಟು ಎಂಬಲ್ಲಿ ಧರ್ಮಸ್ಥಳ ಮೇಳದ ಕಲಾವಿದ ಚಂದ್ರಶೇಖರ ಸರಪಾಡಿ ಅವರು ಕುಟುಂಬಕ್ಕೆ ಹಸ್ತಾಂತರಿಸಿ ಗೃಹಪ್ರವೇಶ ನೆರವೇರಿ ಸಲಾಯಿತು.ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಮಾತನಾಡಿ, ಒಂಬತ್ತು ವರ್ಷಗಳಲ್ಲಿ ಯಕ್ಷಗಾನ ಕಲಾವಿದರಿಗೆ ಸುಮಾರು 13 ಕೋಟಿ ವೆಚ್ಚದಲ್ಲಿ ವಿವಿಧ ರೀತಿಯಲ್ಲಿ ನೆರವು ನೀಡಲಾಗಿದ್ದು, ದಾನಿಗಳ ನೆರವಿನಿಂದ ಮುಂದಿನ ಒಂದೂವರೆ ವರ್ಷದಲ್ಲಿ 100 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದರು.
ಬೆಂಗಳೂರಿನ ಉದ್ಯಮಿ ಆರ್. ಕೆ.ಭಟ್, ಬಂಟ್ವಾಳ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ, ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡ ಮಾತನಾಡಿದರು.
ಕಲಾವಿದ ಚಂದ್ರಶೇಖರ ಸರಪಾಡಿ ದಂಪತಿ, ಪೋಷಕರಾದ ಗಂಗಯ್ಯ ನಾಯ್, ಪ್ರೇಮಾ, ಉಮೇಶ್ ಮಠದಬೆಟ್ಟು ಭಾಗವಹಿಸಿದ್ದರು.
ಸರಪಾಡಿ ಘಟಕದ ಸಂಚಾಲಕ ಸರಪಾಡಿ ಅಶೋಕ ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶು ಧನಂಜಯ ಶೆಟ್ಟಿ ನಾಡಬೆಟ್ಟು ಕಾರ್ಯಕ್ರಮ ನಿರೂಪಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…