ಜನ ಮನದ ನಾಡಿ ಮಿಡಿತ

Advertisement

ನರಿಮೊಗ್ರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಟೈಲರಿಂಗ್ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ

ದಿನಾಂಕ. 29.10.2024ರಂದು ನರಿಮೊಗರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ ) ಮಂಗಳೂರು.(ಬ್ಯಾಂಕ್ ಆಫ್ ಬರೋಡ ಸಂಯೋಜಿತ ಸಂಸ್ಥೆ) . ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ . ಎನ್ ಆರ್ ಎಲ್ ಎಂ ತಾಲೂಕು ಅಭಿಯಾನ ನಿರ್ವಹಣಾ ಘಟಕ ಪುತ್ತೂರು, ಗ್ರಾಮ ಪಂಚಾಯತ್ ನರಿಮೊಗರು ಮತ್ತು ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ) ನರಿಮೊಗರು ಇದರ ಜಂಟಿ ಆಶ್ರಯದಲ್ಲಿ ಹೊಲಿಗೆ ತರಬೇತಿ ಕಾರ್ಯಗಾರ ಸಮಾರೋಪ ಸಮಾರಂಭ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರೀಮತಿ ಹರಿಣಿ ವಹಿಸಿ ಶುಭ ಹಾರೈಸಿದರು.

ಕಾರ್ಯ ಗಾರದ ಬಗ್ಗೆ ಪ್ರಾಸ್ತಾವಿಕ ನುಡಿ ಶ್ರೀ ವಿಶ್ವನಾಥ ಶೆಟ್ಟಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ನೆರವೇರಿಸಿ ಎಲ್ಲಾ ಶಿಬಿರಾರ್ಥಿಗಳು ಸ್ವ ಉದ್ಯೋಗ ಮಾಡಬೇಕು ಎಂದು ಹಿತನುಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಜೀವನ್ ಕೊಲ್ಯ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಮಾತನಾಡುತ್ತಾ ಕಾರ್ಯ ಗಾರದ ನಿಯಮ .ಯೋಜನೆ.ಹಾಗೂ ಸ್ವ ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯಹಾಗು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಕಾರ್ಯ ಕ್ರಮ ಗಳ ಬಗ್ಗೆ ವಿವರಿಸಿದರು. . ಮುಖ್ಯ ಅತಿಥಿಗಳಾಗಿ ರವಿಚಂದ್ರ ಯು ಪಂಚಾಯತ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ನರಿಮೊಗ್ರು ಕಾರ್ಯಕ್ರಮದ ಬಗ್ಗೆ, ಸಂಜೀವಿನಿ ಯೋಜನೆಯ ಬಗ್ಗೆ ವಿವರವಾಗಿ ತಿಳಿಸಿದರು ಶ್ರೀ ಸುಧಾಕರ ಕುಲಾಲ್ ನರಿಮೊಗರು ಗ್ರಾಮ ಪಂಚಾಯತ್ ಸದಸ್ಯರು ಶುಭಾಶಯ ಕೋರಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು.

ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ( ರಿ) ಅದ್ಯಕ್ಷರು ಶ್ರೀ ಮತಿ ಪೂರ್ಣಿಮ, ತರಬೇತುದಾರರಾದ ಶ್ರೀ ಮತಿ ಪ್ರೀತಿ ಆಚಾರ್ಯ, ಶ್ರೀಮತಿ ನಳಿನಿ ತಾಲೂಕು ವ್ಯವಸ್ಥಾಪಕರು ಕೃಷಿಯೇತರ ಚಟುವಟಿಕೆ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಮತಿ ಸುನೀತಾ ಸ್ಥಳೀಯ ಸಂಪನ್ಮೂಲ ವ್ಯಕ್ತಿ ಇವರು ನೆರವೇರಿಸಿದರು. ಸಂಜೀವಿನಿ ಮುಖ್ಯ ಪುಸ್ತಕ ಬರಹಗಾರರು ಶ್ರೀಮತಿ ಅನುರಾಧ ಪ್ರಭು ಸ್ವಾಗತಿಸಿದರು .ವಂದನಾರ್ಪಣೆ ಯನ್ನು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಬೇಬಿ ಇವರು ನೆರವೇರಿಸಿದರು. ಕಾರ್ಯ ಕ್ರಮ ದಲ್ಲಿ ಸಂಜೀವಿನಿ ಸದಸ್ಯರು . ಒಕ್ಕೂಟದ ಎಲ್ಲಾ ಪದಾಧಿಕಾರಿಯವರು .ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಶಿಬಿರಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!