ದಿನಾಂಕ. 29.10.2024ರಂದು ನರಿಮೊಗರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ ) ಮಂಗಳೂರು.(ಬ್ಯಾಂಕ್ ಆಫ್ ಬರೋಡ ಸಂಯೋಜಿತ ಸಂಸ್ಥೆ) . ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ . ಎನ್ ಆರ್ ಎಲ್ ಎಂ ತಾಲೂಕು ಅಭಿಯಾನ ನಿರ್ವಹಣಾ ಘಟಕ ಪುತ್ತೂರು, ಗ್ರಾಮ ಪಂಚಾಯತ್ ನರಿಮೊಗರು ಮತ್ತು ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ) ನರಿಮೊಗರು ಇದರ ಜಂಟಿ ಆಶ್ರಯದಲ್ಲಿ ಹೊಲಿಗೆ ತರಬೇತಿ ಕಾರ್ಯಗಾರ ಸಮಾರೋಪ ಸಮಾರಂಭ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರೀಮತಿ ಹರಿಣಿ ವಹಿಸಿ ಶುಭ ಹಾರೈಸಿದರು.
ಕಾರ್ಯ ಗಾರದ ಬಗ್ಗೆ ಪ್ರಾಸ್ತಾವಿಕ ನುಡಿ ಶ್ರೀ ವಿಶ್ವನಾಥ ಶೆಟ್ಟಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ನೆರವೇರಿಸಿ ಎಲ್ಲಾ ಶಿಬಿರಾರ್ಥಿಗಳು ಸ್ವ ಉದ್ಯೋಗ ಮಾಡಬೇಕು ಎಂದು ಹಿತನುಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಜೀವನ್ ಕೊಲ್ಯ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಮಾತನಾಡುತ್ತಾ ಕಾರ್ಯ ಗಾರದ ನಿಯಮ .ಯೋಜನೆ.ಹಾಗೂ ಸ್ವ ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯಹಾಗು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಕಾರ್ಯ ಕ್ರಮ ಗಳ ಬಗ್ಗೆ ವಿವರಿಸಿದರು. . ಮುಖ್ಯ ಅತಿಥಿಗಳಾಗಿ ರವಿಚಂದ್ರ ಯು ಪಂಚಾಯತ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ನರಿಮೊಗ್ರು ಕಾರ್ಯಕ್ರಮದ ಬಗ್ಗೆ, ಸಂಜೀವಿನಿ ಯೋಜನೆಯ ಬಗ್ಗೆ ವಿವರವಾಗಿ ತಿಳಿಸಿದರು ಶ್ರೀ ಸುಧಾಕರ ಕುಲಾಲ್ ನರಿಮೊಗರು ಗ್ರಾಮ ಪಂಚಾಯತ್ ಸದಸ್ಯರು ಶುಭಾಶಯ ಕೋರಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು.
ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ( ರಿ) ಅದ್ಯಕ್ಷರು ಶ್ರೀ ಮತಿ ಪೂರ್ಣಿಮ, ತರಬೇತುದಾರರಾದ ಶ್ರೀ ಮತಿ ಪ್ರೀತಿ ಆಚಾರ್ಯ, ಶ್ರೀಮತಿ ನಳಿನಿ ತಾಲೂಕು ವ್ಯವಸ್ಥಾಪಕರು ಕೃಷಿಯೇತರ ಚಟುವಟಿಕೆ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಮತಿ ಸುನೀತಾ ಸ್ಥಳೀಯ ಸಂಪನ್ಮೂಲ ವ್ಯಕ್ತಿ ಇವರು ನೆರವೇರಿಸಿದರು. ಸಂಜೀವಿನಿ ಮುಖ್ಯ ಪುಸ್ತಕ ಬರಹಗಾರರು ಶ್ರೀಮತಿ ಅನುರಾಧ ಪ್ರಭು ಸ್ವಾಗತಿಸಿದರು .ವಂದನಾರ್ಪಣೆ ಯನ್ನು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಬೇಬಿ ಇವರು ನೆರವೇರಿಸಿದರು. ಕಾರ್ಯ ಕ್ರಮ ದಲ್ಲಿ ಸಂಜೀವಿನಿ ಸದಸ್ಯರು . ಒಕ್ಕೂಟದ ಎಲ್ಲಾ ಪದಾಧಿಕಾರಿಯವರು .ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಶಿಬಿರಾರ್ಥಿಗಳು ಹಾಜರಿದ್ದರು.
ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ ಮಂಗಳೂರಿನ ಫಾದರ್ ಮುಲ್ಲರ್…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…
ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…