ಜನ ಮನದ ನಾಡಿ ಮಿಡಿತ

Advertisement

ಆಡಂಕುದ್ರು : ಟೆಂಪೋ ಲಾರಿ ಢಿಕ್ಕಿ..!: ಪಾದಚಾರಿ ಸಾವು

ತೊಕ್ಕೊಟ್ಟು : ಟೆಂಪೋ ಲಾರಿ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ರಾಷ್ಟಿçÃಯ ಹೆದ್ದಾರಿ 66ರ ತೊಕ್ಕೊಟ್ಟು ಆಡಂಕುದ್ರು ಸಮೀಪ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ಅಪಘಾತದಿಂದ ನಿಯಂತ್ರಣ ತಪ್ಪಿದ ಟೆಂಪೋ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಇಲೆಕ್ಟಿçಕ್ ಕಾರಿಗೆ ಢಿಕ್ಕಿ ಹೊಡೆದು ನಂತರ ಅಂಗಡಿಯೊAದರ ನಾಮಫಲಕಗಳ ಗುದ್ದಿ ಕಂದಕಕ್ಕೆ ಉರುಳಿದೆ.

ಫರಂಗಿಪೇಟೆ ತುಂಬೆ ರೊಟ್ಟಿಗುಡ್ಡೆ ಮನೆಯ ಮೊಹಮ್ಮದ್ ಹುಸೈನ್ (64) ಸಾವನ್ನಪ್ಪಿದವರು. ಮಂಗಳೂರಿನಿAದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಲಾರಿ ಆಡಂಕುದ್ರು ಸಮೀಪ ಪಾದಚಾರಿ ಮೊಹಮ್ಮದ್ ಹುಸೈನ್ ಅವರಿಗೆ ಢಿಕ್ಕಿ ಹೊಡೆದು, ನಿಯಂತ್ರಣ ತಪ್ಪಿದ ಪರಿಣಾಮ , ರಸ್ತೆಬದಿಯಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟಿçಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿ ಮಕ್ಕಳು ಕುಳಿತಿದ್ದು , ಚಾಲಕ ಹಾಟ್ ಚಿಪ್ಸ್ ಅಂಗಡಿಗೆ ತೆರಳಿದ್ದರು.

ಅದೃಷ್ಟವಶಾತ್ ಮಕ್ಕಳು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಎದುರುಭಾಗದಲ್ಲಿ ಬಸ್ಸೊಂದು ಕೆಟ್ಟು ನಿಂತಿದ್ದು, ಅದರ ಪ್ರಯಾಣಿಕರನ್ನು ಇನ್ನೊಂದು ಬಸ್ಸಿಗೆ ಹತ್ತಿಸಲಾಗುತಿತ್ತು. ಹುಸೈನ್ ಬಸ್ಸಲ್ಲಿದ್ದವರೋ ಅಥವಾ ಪಾದಚಾರಿಯೋ ಅನ್ನುವ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಪಘಾತದ ತಕ್ಷಣ ಟೆಂಪೋ ಚಾಲಕ ಸ್ಥಳದಿಂದ ತೆರಳಿ ಉಳ್ಳಾಲ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!