ತೊಕ್ಕೊಟ್ಟು : ಟೆಂಪೋ ಲಾರಿ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ರಾಷ್ಟಿçÃಯ ಹೆದ್ದಾರಿ 66ರ ತೊಕ್ಕೊಟ್ಟು ಆಡಂಕುದ್ರು ಸಮೀಪ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ಅಪಘಾತದಿಂದ ನಿಯಂತ್ರಣ ತಪ್ಪಿದ ಟೆಂಪೋ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಇಲೆಕ್ಟಿçಕ್ ಕಾರಿಗೆ ಢಿಕ್ಕಿ ಹೊಡೆದು ನಂತರ ಅಂಗಡಿಯೊAದರ ನಾಮಫಲಕಗಳ ಗುದ್ದಿ ಕಂದಕಕ್ಕೆ ಉರುಳಿದೆ.
ಫರಂಗಿಪೇಟೆ ತುಂಬೆ ರೊಟ್ಟಿಗುಡ್ಡೆ ಮನೆಯ ಮೊಹಮ್ಮದ್ ಹುಸೈನ್ (64) ಸಾವನ್ನಪ್ಪಿದವರು. ಮಂಗಳೂರಿನಿAದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಲಾರಿ ಆಡಂಕುದ್ರು ಸಮೀಪ ಪಾದಚಾರಿ ಮೊಹಮ್ಮದ್ ಹುಸೈನ್ ಅವರಿಗೆ ಢಿಕ್ಕಿ ಹೊಡೆದು, ನಿಯಂತ್ರಣ ತಪ್ಪಿದ ಪರಿಣಾಮ , ರಸ್ತೆಬದಿಯಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟಿçಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿ ಮಕ್ಕಳು ಕುಳಿತಿದ್ದು , ಚಾಲಕ ಹಾಟ್ ಚಿಪ್ಸ್ ಅಂಗಡಿಗೆ ತೆರಳಿದ್ದರು.
ಅದೃಷ್ಟವಶಾತ್ ಮಕ್ಕಳು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಎದುರುಭಾಗದಲ್ಲಿ ಬಸ್ಸೊಂದು ಕೆಟ್ಟು ನಿಂತಿದ್ದು, ಅದರ ಪ್ರಯಾಣಿಕರನ್ನು ಇನ್ನೊಂದು ಬಸ್ಸಿಗೆ ಹತ್ತಿಸಲಾಗುತಿತ್ತು. ಹುಸೈನ್ ಬಸ್ಸಲ್ಲಿದ್ದವರೋ ಅಥವಾ ಪಾದಚಾರಿಯೋ ಅನ್ನುವ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಪಘಾತದ ತಕ್ಷಣ ಟೆಂಪೋ ಚಾಲಕ ಸ್ಥಳದಿಂದ ತೆರಳಿ ಉಳ್ಳಾಲ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ ಮಂಗಳೂರಿನ ಫಾದರ್ ಮುಲ್ಲರ್…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…
ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…