ತಿರುವನಂತಪುರಂ : ಕೇರಳದ ಪ್ರೊಫೆಸರ್ ಒಬ್ಬರ ಕೈ ಕತ್ತರಿಸಿದ್ದ 2010ರ ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಎನ್ ಐಎ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದಲ್ಲಿ ಆರು ಮಂದಿಯನ್ನು ದೋಷಿಗಳೆಂದು ತೀರ್ಮಾನಿಸಲಾಗಿದೆ. ಪ್ರವಾದಿ ಮುಹಮ್ಮದರನ್ನು ಅವಮಾನಿಸಿದ್ದರೆಂದು ಪ್ರೊಫೆಸರ್ ಟಿ.ಜೆ. ಜೋಸೆಫ್ ರ ಕೈಕತ್ತರಿಸಿದ್ದ ಪ್ರಕರಣ ದ ತೀರ್ಪು ಇದೀಗ ಹೊರಬಿದ್ದಿದೆ.
ಕೇರಳದ ಪ್ರೊಫೆಸರ್ ಟಿ.ಜೆ. ಜೋಸೆಫ್ ಎಂಬವರ ಕೈಕತ್ತರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಹಂತದ ವಿಚಾರಣೆಯ ಬಳಿಕ ಎನ್ ಐಎ ನ್ಯಾಯಾಧೀಶ ಅನಿಲ್ ಭಾಸ್ಕರ್ ಈ ತೀರ್ಪು ನೀಡಿದ್ದಾರೆ. ಪ್ರಶ್ನೆ ಪತ್ರಿಕೆಯೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಅವಹೇಳನ ಮಾಡಿದ್ದಾರೆಂದು ಈ ದಾಳಿ ನಡೆಸಲಾಗಿತ್ತು. ಮೊದಲ ಹಂತದ ವಿಚಾರಣೆಯ 2015ರ ತೀರ್ಪಿನಲ್ಲಿ 13 ಮಂದಿಯನ್ನು ದೋಷಿಗಳನ್ನಾಗಿ ಗುರುತಿಸಲಾಗಿತ್ತು. ಇದೀಗ ಎರಡನೇ ಹಂತದ ವಿಚಾರಣೆಯ ತೀರ್ಪಿನಲ್ಲಿ ಆರು ಮಂದಿಯನ್ನು ದೋಷಿಗಳೆಂದು ಗುರುತಿಸಲಾಗಿದೆ. ಪ್ರೊಫೆಸರ್ ಕೈ ಕತ್ತರಿಸಿದ್ದ ಪ್ರಕರಣದ ಪ್ರಥಮ ಆರೋಪಿ ಸವಾದ್ ಇನ್ನೂ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಳು ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯರೆಂದು ಗುರುತಿಸಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…