ತಿರುವನಂತಪುರಂ : ಕೇರಳದ ಪ್ರೊಫೆಸರ್ ಒಬ್ಬರ ಕೈ ಕತ್ತರಿಸಿದ್ದ 2010ರ ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಎನ್ ಐಎ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದಲ್ಲಿ ಆರು ಮಂದಿಯನ್ನು ದೋಷಿಗಳೆಂದು ತೀರ್ಮಾನಿಸಲಾಗಿದೆ. ಪ್ರವಾದಿ ಮುಹಮ್ಮದರನ್ನು ಅವಮಾನಿಸಿದ್ದರೆಂದು ಪ್ರೊಫೆಸರ್ ಟಿ.ಜೆ. ಜೋಸೆಫ್ ರ ಕೈಕತ್ತರಿಸಿದ್ದ ಪ್ರಕರಣ ದ ತೀರ್ಪು ಇದೀಗ ಹೊರಬಿದ್ದಿದೆ.
ಕೇರಳದ ಪ್ರೊಫೆಸರ್ ಟಿ.ಜೆ. ಜೋಸೆಫ್ ಎಂಬವರ ಕೈಕತ್ತರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಹಂತದ ವಿಚಾರಣೆಯ ಬಳಿಕ ಎನ್ ಐಎ ನ್ಯಾಯಾಧೀಶ ಅನಿಲ್ ಭಾಸ್ಕರ್ ಈ ತೀರ್ಪು ನೀಡಿದ್ದಾರೆ. ಪ್ರಶ್ನೆ ಪತ್ರಿಕೆಯೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಅವಹೇಳನ ಮಾಡಿದ್ದಾರೆಂದು ಈ ದಾಳಿ ನಡೆಸಲಾಗಿತ್ತು. ಮೊದಲ ಹಂತದ ವಿಚಾರಣೆಯ 2015ರ ತೀರ್ಪಿನಲ್ಲಿ 13 ಮಂದಿಯನ್ನು ದೋಷಿಗಳನ್ನಾಗಿ ಗುರುತಿಸಲಾಗಿತ್ತು. ಇದೀಗ ಎರಡನೇ ಹಂತದ ವಿಚಾರಣೆಯ ತೀರ್ಪಿನಲ್ಲಿ ಆರು ಮಂದಿಯನ್ನು ದೋಷಿಗಳೆಂದು ಗುರುತಿಸಲಾಗಿದೆ. ಪ್ರೊಫೆಸರ್ ಕೈ ಕತ್ತರಿಸಿದ್ದ ಪ್ರಕರಣದ ಪ್ರಥಮ ಆರೋಪಿ ಸವಾದ್ ಇನ್ನೂ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಳು ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯರೆಂದು ಗುರುತಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…