ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಗುವಿನ ಮೇಲೆ ಅಮಾನುಷ ಹಲ್ಲೆ: ತಾಯಿ ಹಾಗೂ ಪ್ರಿಯಕರನಿಗೆ ನ್ಯಾಯಾಂಗ ಬಂಧನ..!

ಉಡುಪಿ: ಕೆಲವು ಸಮಯದ ಹಿಂದೆ ಮೂರೂವರೆ ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ತಾಯಿ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಇಬ್ಬರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

 


ಉಡುಪಿ ಜಿಲ್ಲೆ ಅಮಾಸೆಬೈಲು ಠಾಣೆ ವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿತ್ತು. ಆರೋಪಿ ತಾಯಿ ಪೂರ್ಣಪ್ರಿಯಾ ಮತ್ತು ಆಕೆಯ ಪ್ರಿಯಕರ ಸುಹೇಲ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೆಪ್ಟೆಂಬರ್ 13ರಂದು ತಾಯಿ, ಅನಾರೋಗ್ಯದ ಕಾರಣ ನೀಡಿ ಮಗುವನ್ನು ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಳು. ಗಾಯಗಳ ಬಗ್ಗೆ ತಾಯಿ ಪೂರ್ಣಪ್ರಿಯಾ ಯಾವುದೇ ಮಾಹಿತಿ ನೀಡಿರಲಿಲ್ಲ.
ಈ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಅಧಿಕಾರಿಗಳು ಮಗುವಿನ ವಿಚಾರಣೆ ನಡೆಸಿದ್ದರು. ಆ ಬಳಿಕ ಅಮಾಸೆಬೈಲು ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆರಂಭದಲ್ಲಿ ತಾಯಿ, ಮಗು ಜಾರಿ ಬಿದ್ದು ಗಾಯಗೊಂಡಿದೆ ಎಂದು ಹೇಳಿಕೆ ನೀಡಿದ್ದಳು. ಆದರೆ ಮಗು ಮಂಚದಲ್ಲಿ ಮಲಗಬಾರದು ಎಂಬ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಲಾಗಿತ್ತು ಎಂಬ ಅಂಶ ಬಯಲಿಗೆ ಬಂದಿದೆ. ಕೆಲ ಸಮಯದ ಹಿಂದೆ ಮಗುವಿನ ತಂದೆ ನಿಧನರಾಗಿದ್ದರು. ಆ ಬಳಿಕ ಗೆಳೆಯ ಸುಹೇಲ್ ನೊಂದಿಗೆ ಮಗುವಿನ ತಾಯಿ ಪೂರ್ಣಪ್ರಿಯಾ ಸಂಪರ್ಕದಲ್ಲಿದ್ದಳು. ತಾಯಿ ಹಾಗೂ ಆಕೆಯ ಪ್ರಿಯಕರ ಸುಹೇಲ್ ಮಗುವಿನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದರು. ಈ ಸಂಬಂಧ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ಶರಣಾಗಿದ್ದರು. ನ್ಯಾಯಾಲಯ ಮಧ್ಯಾಂತರ ಜಾಮೀನು ಮಂಜೂರು ಮಾಡಿತ್ತಾದರೂ ಪ್ರಕರಣದ ಗಂಭೀರತೆ ಮನಗಂಡು ಇದೀಗ ಜಾಮೀನು ರದ್ದು ಮಾಡಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!