ಉಡುಪಿ: ಕೆಲವು ಸಮಯದ ಹಿಂದೆ ಮೂರೂವರೆ ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ತಾಯಿ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಇಬ್ಬರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಉಡುಪಿ ಜಿಲ್ಲೆ ಅಮಾಸೆಬೈಲು ಠಾಣೆ ವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿತ್ತು. ಆರೋಪಿ ತಾಯಿ ಪೂರ್ಣಪ್ರಿಯಾ ಮತ್ತು ಆಕೆಯ ಪ್ರಿಯಕರ ಸುಹೇಲ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೆಪ್ಟೆಂಬರ್ 13ರಂದು ತಾಯಿ, ಅನಾರೋಗ್ಯದ ಕಾರಣ ನೀಡಿ ಮಗುವನ್ನು ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಳು. ಗಾಯಗಳ ಬಗ್ಗೆ ತಾಯಿ ಪೂರ್ಣಪ್ರಿಯಾ ಯಾವುದೇ ಮಾಹಿತಿ ನೀಡಿರಲಿಲ್ಲ.
ಈ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಅಧಿಕಾರಿಗಳು ಮಗುವಿನ ವಿಚಾರಣೆ ನಡೆಸಿದ್ದರು. ಆ ಬಳಿಕ ಅಮಾಸೆಬೈಲು ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರಂಭದಲ್ಲಿ ತಾಯಿ, ಮಗು ಜಾರಿ ಬಿದ್ದು ಗಾಯಗೊಂಡಿದೆ ಎಂದು ಹೇಳಿಕೆ ನೀಡಿದ್ದಳು. ಆದರೆ ಮಗು ಮಂಚದಲ್ಲಿ ಮಲಗಬಾರದು ಎಂಬ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಲಾಗಿತ್ತು ಎಂಬ ಅಂಶ ಬಯಲಿಗೆ ಬಂದಿದೆ. ಕೆಲ ಸಮಯದ ಹಿಂದೆ ಮಗುವಿನ ತಂದೆ ನಿಧನರಾಗಿದ್ದರು. ಆ ಬಳಿಕ ಗೆಳೆಯ ಸುಹೇಲ್ ನೊಂದಿಗೆ ಮಗುವಿನ ತಾಯಿ ಪೂರ್ಣಪ್ರಿಯಾ ಸಂಪರ್ಕದಲ್ಲಿದ್ದಳು. ತಾಯಿ ಹಾಗೂ ಆಕೆಯ ಪ್ರಿಯಕರ ಸುಹೇಲ್ ಮಗುವಿನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದರು. ಈ ಸಂಬಂಧ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ಶರಣಾಗಿದ್ದರು. ನ್ಯಾಯಾಲಯ ಮಧ್ಯಾಂತರ ಜಾಮೀನು ಮಂಜೂರು ಮಾಡಿತ್ತಾದರೂ ಪ್ರಕರಣದ ಗಂಭೀರತೆ ಮನಗಂಡು ಇದೀಗ ಜಾಮೀನು ರದ್ದು ಮಾಡಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…