ಪುತ್ತೂರು: ನಾನು ಕಳೆದ 40 ವರ್ಷಗಳಿಂದ ಕುಡಿಯುವ ನೀರಿನಸಂಪರ್ಕಕ್ಕೆ ಆರ್ಯಾಪು ಗ್ರಾಪಂಗೆ ಮನವಿ ಮಾಡುತ್ತಿದ್ದರೂ ಕುಡಿಯುವ ನೀರಿನ ಸಂಪರ್ಕ ಕೊಟ್ಟಿಲ್ಲ ಎಂದು ಗ್ರಾಮದ ಪುಂಡಿಕಾಯಿ ನಿವಾಸಿ ಅಪ್ಪಿ ಎಂಬವರು ಶಾಸಕರಿಗೆ ದೂರು ನೀಡಿದ್ದಾರೆ.
ನಾವು ಪುಂಡಿಕಾಯಿಯಲ್ಲಿಮನೆ ಯಲ್ಲಿಕಳೆದ 40 ,ವರ್ಷಗಳಿಂದ ವಾಸ ಮಾಡುತ್ತಿದ್ದೇವೆ, ನಮಗೆ ಕುಡಿಯುವ ನೀರಿಗೆ ಯಾವುದೇ ಆಧಾರವಿಲ್ಲ. ಬಾವಿಯೂ ಇಲ್ಲ. ಪಕ್ಕದಮನೆಯಿಂದ ಕುಡಿಯಲುನೀರು ತರುತ್ತಿದ್ದೇನೆ,ಮಳೆಗಾಲದಲ್ಲಿಮಳೆಯನೀರನ್ನೇ ಕುಡಿಯುತ್ತಿದ್ದೇನೆ. ನಾನು ಮನೆಯಲ್ಲಿ ಏಕಾಂಗಿಯಾಗಿದ್ದುಮನೆಗೆ ವಿದ್ಯುತ್ ಸಂಪರ್ಕವೂ ಇಲ್ಲಎಂದು ಶಾಸಕರಲ್ಲಿದೂರುನೀಡಿದ್ದಾರೆ.
ನೀರಿನವ್ಯವಸ್ಥೆಗೆ ಶಾಸಕರ ಸೂಚನೆ
ಅಪ್ಪಿ ಅವರಮನೆಗೆ ನೀರುಮತ್ತು ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಗ್ರಾಪಂ ಗೆ ಸೂಚನೆನೀಡಿದ್ದಾರೆ. ಪುಂಡಿಕಾಯಿ ಆರ್ಯಾಪು ಮತ್ತು ಒಳಮೊಗ್ರು ಗ್ರಾಮದ ಗಡಿಯಲ್ಲಿದ್ದು ಎರಡೂ ಗ್ರಾಪಂ ಪಿಡಿಒಗಳು ಈ ವಿಚಾರದಲ್ಲಿಮುತುವರ್ಜಿವಹಿಸಿ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದು,ವಿದ್ಯುತ್ ಸಂಪರ್ಕ ನೀಡುವಂತೆ ಮೆಸ್ಕಾಂಗೂ ಶಾಸಕರುಸೂಚನೆ ನೀಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…