ಜನ ಮನದ ನಾಡಿ ಮಿಡಿತ

Advertisement

ಅಜೆಕಾರು ಪ್ರಕರಣ; ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು: ಕೊಲೆಯಾದ ಬಾಲಕೃಷ್ಣ ಪೂಜಾರಿ ಕುಟುಂಬಸ್ಥರ ಆಗ್ರಹ

ಉಡುಪಿ: ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಕೊಂದ ಪ್ರಕರಣ ಕೆಲವು ದಿನಗಳ ಹಿಂದೆ ಸಂಭವಿಸಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಇದೇ ವೇಳೆ ತನಿಖೆಯ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಆರೋಪಿ ಆರ್ಥಿಕವಾಗಿ ಪ್ರಬಲನಾಗಿದ್ದು ತನಿಖೆಯನ್ನು ಹಳ್ಳ ಹಿಡಿಸುವ ಕೆಲಸ ನಡೆಯುತ್ತಿದೆ ಎಂದು ಮೃತ ಬಾಲಕೃಷ್ಣ ಪೂಜಾರಿ ಸಹೋದರ ಪ್ರಕಾಶ್‌ ಪೂಜಾರಿ ಗಂಭೀರ ಆರೋಪ ಮಾಡಿದ್ದಾರೆ.

ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲಕೃಷ್ಣ ಪೂಜಾರಿ ಸಾವಿಗೂ ಮುನ್ನ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು.ಅವರಿಗೆ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್‌ ಹೆಗ್ಡೆ ಸ್ಟೋ ಪಾಯಿಸನ್ ನೀಡುತ್ತಿದ್ದರು. ಆದರೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಯಾಕೆ ಅದು ಗೊತ್ತಾಗಲಿಲ್ಲ? ಗ್ಲೋ ಪಾಯಿಸನ್ ವಿಷಯವನ್ನು ಆಸ್ಪತ್ರೆಯವರು ಮುಚ್ಚಿಟ್ಟಿದ್ದು ಯಾಕೆ? ಎಂದು ಸಹೋದರ ಪ್ರಕಾಶ್‌ ಪೂಜಾರಿ ಪ್ರಶ್ನೆ ಮಾಡಿದ್ದಾರೆ.
ಎರಡನೇ ಆರೋಪಿ ಪ್ರತಿಮಾ ಪ್ರಿಯಕರ ದಿಲೀಪ್ ಹೆಗ್ಡೆ ಪ್ರಭಾವಿ ವ್ಯಕ್ತಿಯಾಗಿದ್ದು ಕಾರ್ಕಳದಲ್ಲಿ ಲಾಡ್ಜ್‌ ನಡೆಸುವ ಪ್ರತಿಷ್ಠಿತ ವ್ಯಕ್ತಿಯ ಮಗನಾಗಿದ್ದಾನೆ. ಪೊಲೀಸ್‌ ಇಲಾಖೆಯ ಮೇಲೆ ದಿಲೀಪ್ ಕುಟುಂಬದವರು ಪ್ರಭಾವ ಬೀರುವ ಆತಂಕ ನಮಗೆ ಇದೆ. ಸರಿಯಾದ ತನಿಖೆ ನಡೆಸಬೇಕು ಎಂದು ಡಿವೈಎಸ್ಪಿಗೆ ಆಗ್ರಹ ಮಾಡಿದ್ದೇವೆ. ಪೊಲೀಸರು ಯಾವುದೇ ಆಮಿಷಗಳಿಗೆ ಒಳಗಾಗದೆ ಸರಿಯಾದ ತನಿಖೆ ನಡೆಸಬೇಕು. ಈ ಪ್ರಕರಣದಲ್ಲಿ ನ್ಯಾಯ ಬೇಕು. ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು. ಆಗದಿದ್ದರೆ ಸಮಾಜಕ್ಕೆ ಬೇರೆಯದೇ ಸಂದೇಶ ರವಾನೆಯಾಗುತ್ತದೆ ಎಂದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!