ಉಡುಪಿ: ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಕೊಂದ ಪ್ರಕರಣ ಕೆಲವು ದಿನಗಳ ಹಿಂದೆ ಸಂಭವಿಸಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಇದೇ ವೇಳೆ ತನಿಖೆಯ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಆರೋಪಿ ಆರ್ಥಿಕವಾಗಿ ಪ್ರಬಲನಾಗಿದ್ದು ತನಿಖೆಯನ್ನು ಹಳ್ಳ ಹಿಡಿಸುವ ಕೆಲಸ ನಡೆಯುತ್ತಿದೆ ಎಂದು ಮೃತ ಬಾಲಕೃಷ್ಣ ಪೂಜಾರಿ ಸಹೋದರ ಪ್ರಕಾಶ್ ಪೂಜಾರಿ ಗಂಭೀರ ಆರೋಪ ಮಾಡಿದ್ದಾರೆ.
ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲಕೃಷ್ಣ ಪೂಜಾರಿ ಸಾವಿಗೂ ಮುನ್ನ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು.ಅವರಿಗೆ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್ ಹೆಗ್ಡೆ ಸ್ಟೋ ಪಾಯಿಸನ್ ನೀಡುತ್ತಿದ್ದರು. ಆದರೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಯಾಕೆ ಅದು ಗೊತ್ತಾಗಲಿಲ್ಲ? ಗ್ಲೋ ಪಾಯಿಸನ್ ವಿಷಯವನ್ನು ಆಸ್ಪತ್ರೆಯವರು ಮುಚ್ಚಿಟ್ಟಿದ್ದು ಯಾಕೆ? ಎಂದು ಸಹೋದರ ಪ್ರಕಾಶ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.
ಎರಡನೇ ಆರೋಪಿ ಪ್ರತಿಮಾ ಪ್ರಿಯಕರ ದಿಲೀಪ್ ಹೆಗ್ಡೆ ಪ್ರಭಾವಿ ವ್ಯಕ್ತಿಯಾಗಿದ್ದು ಕಾರ್ಕಳದಲ್ಲಿ ಲಾಡ್ಜ್ ನಡೆಸುವ ಪ್ರತಿಷ್ಠಿತ ವ್ಯಕ್ತಿಯ ಮಗನಾಗಿದ್ದಾನೆ. ಪೊಲೀಸ್ ಇಲಾಖೆಯ ಮೇಲೆ ದಿಲೀಪ್ ಕುಟುಂಬದವರು ಪ್ರಭಾವ ಬೀರುವ ಆತಂಕ ನಮಗೆ ಇದೆ. ಸರಿಯಾದ ತನಿಖೆ ನಡೆಸಬೇಕು ಎಂದು ಡಿವೈಎಸ್ಪಿಗೆ ಆಗ್ರಹ ಮಾಡಿದ್ದೇವೆ. ಪೊಲೀಸರು ಯಾವುದೇ ಆಮಿಷಗಳಿಗೆ ಒಳಗಾಗದೆ ಸರಿಯಾದ ತನಿಖೆ ನಡೆಸಬೇಕು. ಈ ಪ್ರಕರಣದಲ್ಲಿ ನ್ಯಾಯ ಬೇಕು. ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು. ಆಗದಿದ್ದರೆ ಸಮಾಜಕ್ಕೆ ಬೇರೆಯದೇ ಸಂದೇಶ ರವಾನೆಯಾಗುತ್ತದೆ ಎಂದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…