ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪ್ರಿಯಕರ ಜೊತೆ ಸೇರಿ ಪತಿಯನ್ನು ಕೊಂದ ರೀಲ್ಸ್ ರಾಣಿ ಪ್ರತಿಮಾಳಿಂದ ಸಹೋದರನಿಗೂ ವಿಷಪ್ರಾಶನ ಮಾಡಿರುವ ಶಂಕೆ?

ಉಡುಪಿ: ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ರೀಲ್ಸ್ ರಾಣಿ ಪ್ರತಿಮಾ, ತನ್ನ ಸಹೋದರನಿಗೂ ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ತನ್ನ ಅಕ್ರಮ ಸಂಬಂಧಕ್ಕೆ ಸಹೋದರ ಅಡ್ಡಿಯಾಗುತ್ತಿದ್ದ ಎಂಬ ಕಾರಣಕ್ಕೆ ಆತನನ್ನು ಸೈಲೆಂಟ್ ಆಗಿ ಮುಗಿಸಲು ಪ್ಲ್ಯಾನ್ ಹಾಕಿದ್ದಳು ಎಂಬ ಅನುಮಾನ ಮೂಡಿದೆ.

ಹೌದು, ಪ್ರತಿಮಾಳ ಘನಘೋರ ಕೃತ್ಯವನ್ನು ಬಯಲಿಗೆ ತಂದವರೇ ಸಹೋದರ ಸಂದೀಪ್. ವಾಯ್ಸ್ ರೆಕಾರ್ಡ್ ಮಾಡುವ ಮೂಲಕ ಪ್ರತಿಮಾಳ ಸಂಚು ಬಯಲು ಮಾಡಿದ್ದರು. ಅಲ್ಲದೆ, ಈ ಪ್ರಕರಣದ ಪ್ರಮುಖ ಸಾಕ್ಷಿ ಕೂಡ ಅವರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆ ಸಹೋದರನಿಗೂ ವಿಷ ಹಾಕಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ‌. ಸಹೋದರ ಸಂದೀಪ್ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿರುವುದು ಎಷ್ಟೆಲ್ಲ ಸಂಶಯಕ್ಕೆ ಕಾರಣ.

ಬೈಟ್, ಸಹೋದರ ಸಂದೀಪ್ ಪೂಜಾರಿ

ನನ್ನ ಆರೋಗ್ಯದಲ್ಲೂ ಕೆಲವು ತಿಂಗಳಿನಿಂದ ವ್ಯತ್ಯಾಸ ಉಂಟಾಗುತ್ತಿದೆ. ಸ್ನಾಯು ಸೆಳೆತ, ಕುತ್ತಿಗೆ ಭಾಗದಲ್ಲಿ ನೋವು ಆಗಾಗ ಕಾಣಿಸಿಕೊಳ್ಳುತ್ತಿದೆ. ಎರಡು ಬಾರಿ ಆಕೆಯ ಮನೆಯಲ್ಲಿ ಊಟ ಮಾಡಿದ್ದೇನೆ. ಮಗುವಿನ ಹುಟ್ಟುಹಬ್ಬದ ಸಂದರ್ಭದಲ್ಲಿ ಊಟ ಮಾಡಿದ್ದೆ. ಹೀಗಾಗಿ ನನಗೂ ನನ್ನ ತಂಗಿ ವಿಷವುನಿಸಿರುವ ಬಗ್ಗೆ ಅನುಮಾನವಿದೆ. ಹೀಗಾಗಿ ನಾನು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುತ್ತೇನೆ.
ನನ್ನ ಸಹೋದರಿ ಪ್ರತಿಮಾ ಹಾಗೂ ದಿಲೀಪ್ ಹೆಗ್ಡೆಗೆ ಕಠಿಣ ಶಿಕ್ಷೆ ಆಗಬೇಕು. ಇಬ್ಬರಿಗೂ ಜೀವಾವಧಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಕೊಲೆ ಪ್ರಕರಣ ಬಯಲಿಗೆ ಬಂದಾಗ ಅನಾಮಿಕ ಕರೆ ಬಂದಿತ್ತು. ವಿಷಯ ಸೆಟಲ್ ಮಾಡಿಕೊಳ್ಳೋಣ ನಿನಗೆ ಹಣ ಕೊಡುತ್ತೇವೆ ಎಂದಿದ್ದರು. ಹತ್ತರಿಂದ ಇಪ್ಪತ್ತು ಲಕ್ಷ ರೂಪಾಯಿ ನೀಡುತ್ತೇವೆ ಎಂದು ಆಮಿಷಯೊಡ್ಡಿದ್ದರು. ಯಾರು ಕರೆ ಮಾಡಿದ್ದಾರೋ ಗೊತ್ತಿಲ್ಲ, ಸಾವಿನ ಟೆನ್ಶನ್ ನಲ್ಲಿ ನಾನು ಗಮನ ಕೊಟ್ಟಿಲ್ಲ. ಮಕ್ಕಳ ಭವಿಷ್ಯ ನೋಡಿಕೊಳ್ಳೋಣ ಎಂದು ಹೇಳಿದ್ದರು. ಆದರೆ ಈ ಪ್ರಕರಣದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!