ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ಮಂಗಳವಾರ ತಡರಾತ್ರಿಗೆ ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ.ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣವನ್ನು ಕಳ್ಳತನ ಮಾಡಲಾಗಿದೆ.ಇದರ ಜೊತೆಗೆ ಗೊದ್ರೇಜ್ , ಕ್ಯಾಸ್ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕೂಡ ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ.
ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ. ಸೋಮವಾರ ಮುಂಜಾನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ದೇವಸ್ಥಾನವೊಂದರ ಕಳವು ನಡೆಯುವುದನ್ನು ಸ್ವತಃ ಅಲ್ಲಿನ ಅರ್ಚಕರು ಸಿ.ಸಿ.ಕ್ಯಾಮರಾ ದ ಮೂಲಕ ನೋಡಿದ್ದಾರೆ ಆದರೂ ಕಳ್ಳರ ಬಳಿ ಮಾರಕಾಸ್ತ್ರಗಳು ಇರುವುದು ಕಂಡು ಬಂದದ್ದರಿಂದ ತಡೆಯಲು ಅಸಾಧ್ಯವಾಗಿತ್ತು. ಮತ್ತು ಈ ಕಳ್ಳತನದ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು ಸುದ್ದಿಯಾಗಿತ್ತು. ಅಂತಹ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕಳ್ಳರು ಯೋಚಿಸಿಯಾಗಿರಬೇಕು,ಇಲ್ಲಿನ ಸಿ.ಸಿ.ಕ್ಯಾಮರಾ ದ ಪೂಟೇಜ್ ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.ಇಂದು ಬೆಳಿಗ್ಗೆ ದೇವಸ್ಥಾನದ ಸಿಬ್ಬಂದಿಯೊರ್ವರು 6.ಗಂಟೆಗೆ ಬಂದಾಗ ಮುಂಬಾಗಿಲು ಚಿಲಕ ಮುರಿದಿದ್ದು ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ದೇವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ತುಂಬೆಯವರಿಗೆ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…