ಎಡನೀರು ಮಠದ ಸ್ವಾಮೀಜಿಗಳು ನಮಗೆಲ್ಲ ಮಾರ್ಗದರ್ಶಕರು ನಮ್ಮ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಿಗೆ ಅವರ ಮಾರ್ಗದರ್ಶನದ ಮೂಲಕವೇ ನಾವು ಮುನ್ನಡೆಯುತ್ತಿದ್ದೇವೆ.
ಕೆಮ್ಮಾಯಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಸ್ವಾಮೀಜಿಯವರು ಚಾತುರ್ಮಾಸ ವೃತವನ್ನು ಕೂಡ ನಡೆಸಿದ್ದಾರೆ. ಮಹಾ ವಿಷ್ಣು ದೇವಸ್ಥಾನದ ಭಕ್ತರಾಗಿರುವ ನಮಗೆಲ್ಲ ಮಾರ್ಗದರ್ಶರಾಗಿರುವಂತ ಶ್ರೀಗಳ ಈ ಒಂದು ಹಿಂದೂ ಧರ್ಮದ ಕಾರ್ಯಗಳಿಗೆ ಕಿಡಿಗೇಡಿಗಳು ಅಡ್ಡಿಯನ್ನು ಉಂಟುಮಾಡುವಂತದ್ದು ಅತ್ಯಂತ ಖಂಡನೀಯವಾಗಿದೆ ಕೇರಳದ ಗಡಿ ಭಾಗದಲ್ಲಿರುವಂತ ಎಡನೀರು ಮಠ ಅತ್ಯಂತ ಪವಿತ್ರವಾದ ಮತ್ತು ಪ್ರಾಚೀನ ಪರಂಪರೆ ಹೊಂದಿರುವ ಮಠ, ಈ ಮಠದ ಸ್ವಾಮೀಜಿಗಳಿಗೆ ರಕ್ಷಣೆ ಕೊಡುವಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವರ ಭಕ್ತರು ಇಲ್ಲಿಯ ಸ್ಥಳೀಯ ಎಲ್ಲಾ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಉಗ್ರವಾಗಿ ಹೋರಾಟ ಮಾಡುತ್ತೇವೆ. ಈ ಘಟನೆ ಹಿಂದುಗಳ ಧಾರ್ಮಿಕ ಭಾವನೆಗೆ ನಂಬಿಕೆಗೆ ಧಕ್ಕೆಯನ್ನುಂಟು ಮಾಡಿದೆ ನಮಗೆಲ್ಲ ಅಪಾರ ನೋವಾಗಿದೆ ನಾವೆಲ್ಲ ಶ್ರೀಗಳ ಪರವಾಗಿ ಶ್ರೀಮಠದ ಪರವಾಗಿ ಈ ಕೃತ್ಯವನ್ನು ಗಟ್ಟಿ ಧ್ವನಿಯಲ್ಲಿ ಖಂಡಿಸುತ್ತಿದ್ದೇವೆ ಎಚ್ಚರಿಕೆಯನ್ನು ಕೂಡ ನೀಡುತ್ತಿದ್ದೇವೆ. ನಾಗೇಶ್ ಟಿ ಎಸ್ ಕೆಮ್ಮಾಯಿ ಭಕ್ತ ವೃಂದ ಮಹಾವಿಷ್ಣುಮೂರ್ತಿ ದೇವಸ್ಥಾನ ಕೆಮ್ಮಾಯಿ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…