ಎಡನೀರು ಮಠದ ಸ್ವಾಮೀಜಿಗಳು ನಮಗೆಲ್ಲ ಮಾರ್ಗದರ್ಶಕರು ನಮ್ಮ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಿಗೆ ಅವರ ಮಾರ್ಗದರ್ಶನದ ಮೂಲಕವೇ ನಾವು ಮುನ್ನಡೆಯುತ್ತಿದ್ದೇವೆ.
ಕೆಮ್ಮಾಯಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಸ್ವಾಮೀಜಿಯವರು ಚಾತುರ್ಮಾಸ ವೃತವನ್ನು ಕೂಡ ನಡೆಸಿದ್ದಾರೆ. ಮಹಾ ವಿಷ್ಣು ದೇವಸ್ಥಾನದ ಭಕ್ತರಾಗಿರುವ ನಮಗೆಲ್ಲ ಮಾರ್ಗದರ್ಶರಾಗಿರುವಂತ ಶ್ರೀಗಳ ಈ ಒಂದು ಹಿಂದೂ ಧರ್ಮದ ಕಾರ್ಯಗಳಿಗೆ ಕಿಡಿಗೇಡಿಗಳು ಅಡ್ಡಿಯನ್ನು ಉಂಟುಮಾಡುವಂತದ್ದು ಅತ್ಯಂತ ಖಂಡನೀಯವಾಗಿದೆ ಕೇರಳದ ಗಡಿ ಭಾಗದಲ್ಲಿರುವಂತ ಎಡನೀರು ಮಠ ಅತ್ಯಂತ ಪವಿತ್ರವಾದ ಮತ್ತು ಪ್ರಾಚೀನ ಪರಂಪರೆ ಹೊಂದಿರುವ ಮಠ, ಈ ಮಠದ ಸ್ವಾಮೀಜಿಗಳಿಗೆ ರಕ್ಷಣೆ ಕೊಡುವಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವರ ಭಕ್ತರು ಇಲ್ಲಿಯ ಸ್ಥಳೀಯ ಎಲ್ಲಾ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಉಗ್ರವಾಗಿ ಹೋರಾಟ ಮಾಡುತ್ತೇವೆ. ಈ ಘಟನೆ ಹಿಂದುಗಳ ಧಾರ್ಮಿಕ ಭಾವನೆಗೆ ನಂಬಿಕೆಗೆ ಧಕ್ಕೆಯನ್ನುಂಟು ಮಾಡಿದೆ ನಮಗೆಲ್ಲ ಅಪಾರ ನೋವಾಗಿದೆ ನಾವೆಲ್ಲ ಶ್ರೀಗಳ ಪರವಾಗಿ ಶ್ರೀಮಠದ ಪರವಾಗಿ ಈ ಕೃತ್ಯವನ್ನು ಗಟ್ಟಿ ಧ್ವನಿಯಲ್ಲಿ ಖಂಡಿಸುತ್ತಿದ್ದೇವೆ ಎಚ್ಚರಿಕೆಯನ್ನು ಕೂಡ ನೀಡುತ್ತಿದ್ದೇವೆ. ನಾಗೇಶ್ ಟಿ ಎಸ್ ಕೆಮ್ಮಾಯಿ ಭಕ್ತ ವೃಂದ ಮಹಾವಿಷ್ಣುಮೂರ್ತಿ ದೇವಸ್ಥಾನ ಕೆಮ್ಮಾಯಿ
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…