ಎಡನೀರು ಮಠದ ಸ್ವಾಮೀಜಿಗಳು ನಮಗೆಲ್ಲ ಮಾರ್ಗದರ್ಶಕರು ನಮ್ಮ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಿಗೆ ಅವರ ಮಾರ್ಗದರ್ಶನದ ಮೂಲಕವೇ ನಾವು ಮುನ್ನಡೆಯುತ್ತಿದ್ದೇವೆ.
ಕೆಮ್ಮಾಯಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಸ್ವಾಮೀಜಿಯವರು ಚಾತುರ್ಮಾಸ ವೃತವನ್ನು ಕೂಡ ನಡೆಸಿದ್ದಾರೆ. ಮಹಾ ವಿಷ್ಣು ದೇವಸ್ಥಾನದ ಭಕ್ತರಾಗಿರುವ ನಮಗೆಲ್ಲ ಮಾರ್ಗದರ್ಶರಾಗಿರುವಂತ ಶ್ರೀಗಳ ಈ ಒಂದು ಹಿಂದೂ ಧರ್ಮದ ಕಾರ್ಯಗಳಿಗೆ ಕಿಡಿಗೇಡಿಗಳು ಅಡ್ಡಿಯನ್ನು ಉಂಟುಮಾಡುವಂತದ್ದು ಅತ್ಯಂತ ಖಂಡನೀಯವಾಗಿದೆ ಕೇರಳದ ಗಡಿ ಭಾಗದಲ್ಲಿರುವಂತ ಎಡನೀರು ಮಠ ಅತ್ಯಂತ ಪವಿತ್ರವಾದ ಮತ್ತು ಪ್ರಾಚೀನ ಪರಂಪರೆ ಹೊಂದಿರುವ ಮಠ, ಈ ಮಠದ ಸ್ವಾಮೀಜಿಗಳಿಗೆ ರಕ್ಷಣೆ ಕೊಡುವಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವರ ಭಕ್ತರು ಇಲ್ಲಿಯ ಸ್ಥಳೀಯ ಎಲ್ಲಾ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಉಗ್ರವಾಗಿ ಹೋರಾಟ ಮಾಡುತ್ತೇವೆ. ಈ ಘಟನೆ ಹಿಂದುಗಳ ಧಾರ್ಮಿಕ ಭಾವನೆಗೆ ನಂಬಿಕೆಗೆ ಧಕ್ಕೆಯನ್ನುಂಟು ಮಾಡಿದೆ ನಮಗೆಲ್ಲ ಅಪಾರ ನೋವಾಗಿದೆ ನಾವೆಲ್ಲ ಶ್ರೀಗಳ ಪರವಾಗಿ ಶ್ರೀಮಠದ ಪರವಾಗಿ ಈ ಕೃತ್ಯವನ್ನು ಗಟ್ಟಿ ಧ್ವನಿಯಲ್ಲಿ ಖಂಡಿಸುತ್ತಿದ್ದೇವೆ ಎಚ್ಚರಿಕೆಯನ್ನು ಕೂಡ ನೀಡುತ್ತಿದ್ದೇವೆ. ನಾಗೇಶ್ ಟಿ ಎಸ್ ಕೆಮ್ಮಾಯಿ ಭಕ್ತ ವೃಂದ ಮಹಾವಿಷ್ಣುಮೂರ್ತಿ ದೇವಸ್ಥಾನ ಕೆಮ್ಮಾಯಿ
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…