ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗೃಹಲಕ್ಷ್ಮಿ ಹಣದಲ್ಲಿ ಕವಾಟು ಖರೀದಿಸಿದ ಕೂಲಿ ಕಾರ್ಮಿಕ ಮಹಿಳೆ

ಉಡುಪಿ: ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ.

ಪರ್ಕಳದ ಕ್ಯಾಂಟೀನ್ ವೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಈಕೆ ಕೆಲಸ ಮಾಡುತ್ತಾರೆ. ಹಾವೇರಿ ಮೂಲದ ಕೆಲಸದಾಳು ಕುಸುಮ ಮಾಡಿವಾಲ್ತಿ ಕವಾಟು ಖರೀದಿಸಿದ ಗ್ರಹಲಕ್ಷ್ಮಿ. ಈಕೆಯ ರೇಶನ್ ಕಾರ್ಡು ನಲ್ಲಿ ಅಲ್ಪ ಸ್ವಲ್ಪ ದೋಷವಿತ್ತು. ರೇಶನ್ ಕಾರ್ಡು ತಿದ್ದುಪಡಿ ಮಾಡಿ, ನಂತರ ಗೃಹಲಕ್ಷ್ಮಿಗೆ ಅರ್ಜಿ ಹಾಕಲು ಹೋಟೆಲ್ ಮಾಲೀಕರು ನೆರವಾಗಿದ್ದರು . ಕೊನೆಗೆ ಬಂದ ಹಣವನ್ನು ಕೂಡಿಟ್ಟು , ಕಾವಾಟು ಖರೀದಿ ಮಾಡಿದ ಈಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರು ಈ ಫೋಟೋ ಹಂಚಿಕೊಂಡಿದ್ದಾರೆ .ಇನ್ನು ನಾಲ್ಕು ಕಂತಿನ ಹಣ ಬ್ಯಾಂಕ್ ನಲ್ಲಿ ಠೇವಣಿ ಇರಿಸಿದ್ದಾರೆ. ನಮ್ಮಂತಹ ಕೂಲಿ ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಆಧಾರವಾಗಿದೆ. ರೇಷನ್ ಕಾರ್ಡ್ ತಿದ್ದು ಪಡಿಗೆ ಮತ್ತು ಅರ್ಜಿ ಸಲ್ಲಿಸಲು ಸಹಕರಿಸಿದವರಿಗೆ ಕುಸುಮಾ ಥ್ಯಾಂಕ್ಸ್ ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!