ಉಡುಪಿ: ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ.
ಪರ್ಕಳದ ಕ್ಯಾಂಟೀನ್ ವೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಈಕೆ ಕೆಲಸ ಮಾಡುತ್ತಾರೆ. ಹಾವೇರಿ ಮೂಲದ ಕೆಲಸದಾಳು ಕುಸುಮ ಮಾಡಿವಾಲ್ತಿ ಕವಾಟು ಖರೀದಿಸಿದ ಗ್ರಹಲಕ್ಷ್ಮಿ. ಈಕೆಯ ರೇಶನ್ ಕಾರ್ಡು ನಲ್ಲಿ ಅಲ್ಪ ಸ್ವಲ್ಪ ದೋಷವಿತ್ತು. ರೇಶನ್ ಕಾರ್ಡು ತಿದ್ದುಪಡಿ ಮಾಡಿ, ನಂತರ ಗೃಹಲಕ್ಷ್ಮಿಗೆ ಅರ್ಜಿ ಹಾಕಲು ಹೋಟೆಲ್ ಮಾಲೀಕರು ನೆರವಾಗಿದ್ದರು . ಕೊನೆಗೆ ಬಂದ ಹಣವನ್ನು ಕೂಡಿಟ್ಟು , ಕಾವಾಟು ಖರೀದಿ ಮಾಡಿದ ಈಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರು ಈ ಫೋಟೋ ಹಂಚಿಕೊಂಡಿದ್ದಾರೆ .ಇನ್ನು ನಾಲ್ಕು ಕಂತಿನ ಹಣ ಬ್ಯಾಂಕ್ ನಲ್ಲಿ ಠೇವಣಿ ಇರಿಸಿದ್ದಾರೆ. ನಮ್ಮಂತಹ ಕೂಲಿ ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಆಧಾರವಾಗಿದೆ. ರೇಷನ್ ಕಾರ್ಡ್ ತಿದ್ದು ಪಡಿಗೆ ಮತ್ತು ಅರ್ಜಿ ಸಲ್ಲಿಸಲು ಸಹಕರಿಸಿದವರಿಗೆ ಕುಸುಮಾ ಥ್ಯಾಂಕ್ಸ್ ಹೇಳಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…