ಉಡುಪಿ: ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ.
ಪರ್ಕಳದ ಕ್ಯಾಂಟೀನ್ ವೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಈಕೆ ಕೆಲಸ ಮಾಡುತ್ತಾರೆ. ಹಾವೇರಿ ಮೂಲದ ಕೆಲಸದಾಳು ಕುಸುಮ ಮಾಡಿವಾಲ್ತಿ ಕವಾಟು ಖರೀದಿಸಿದ ಗ್ರಹಲಕ್ಷ್ಮಿ. ಈಕೆಯ ರೇಶನ್ ಕಾರ್ಡು ನಲ್ಲಿ ಅಲ್ಪ ಸ್ವಲ್ಪ ದೋಷವಿತ್ತು. ರೇಶನ್ ಕಾರ್ಡು ತಿದ್ದುಪಡಿ ಮಾಡಿ, ನಂತರ ಗೃಹಲಕ್ಷ್ಮಿಗೆ ಅರ್ಜಿ ಹಾಕಲು ಹೋಟೆಲ್ ಮಾಲೀಕರು ನೆರವಾಗಿದ್ದರು . ಕೊನೆಗೆ ಬಂದ ಹಣವನ್ನು ಕೂಡಿಟ್ಟು , ಕಾವಾಟು ಖರೀದಿ ಮಾಡಿದ ಈಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರು ಈ ಫೋಟೋ ಹಂಚಿಕೊಂಡಿದ್ದಾರೆ .ಇನ್ನು ನಾಲ್ಕು ಕಂತಿನ ಹಣ ಬ್ಯಾಂಕ್ ನಲ್ಲಿ ಠೇವಣಿ ಇರಿಸಿದ್ದಾರೆ. ನಮ್ಮಂತಹ ಕೂಲಿ ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಆಧಾರವಾಗಿದೆ. ರೇಷನ್ ಕಾರ್ಡ್ ತಿದ್ದು ಪಡಿಗೆ ಮತ್ತು ಅರ್ಜಿ ಸಲ್ಲಿಸಲು ಸಹಕರಿಸಿದವರಿಗೆ ಕುಸುಮಾ ಥ್ಯಾಂಕ್ಸ್ ಹೇಳಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…