ಉಡುಪಿ: ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ.
ಪರ್ಕಳದ ಕ್ಯಾಂಟೀನ್ ವೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಈಕೆ ಕೆಲಸ ಮಾಡುತ್ತಾರೆ. ಹಾವೇರಿ ಮೂಲದ ಕೆಲಸದಾಳು ಕುಸುಮ ಮಾಡಿವಾಲ್ತಿ ಕವಾಟು ಖರೀದಿಸಿದ ಗ್ರಹಲಕ್ಷ್ಮಿ. ಈಕೆಯ ರೇಶನ್ ಕಾರ್ಡು ನಲ್ಲಿ ಅಲ್ಪ ಸ್ವಲ್ಪ ದೋಷವಿತ್ತು. ರೇಶನ್ ಕಾರ್ಡು ತಿದ್ದುಪಡಿ ಮಾಡಿ, ನಂತರ ಗೃಹಲಕ್ಷ್ಮಿಗೆ ಅರ್ಜಿ ಹಾಕಲು ಹೋಟೆಲ್ ಮಾಲೀಕರು ನೆರವಾಗಿದ್ದರು . ಕೊನೆಗೆ ಬಂದ ಹಣವನ್ನು ಕೂಡಿಟ್ಟು , ಕಾವಾಟು ಖರೀದಿ ಮಾಡಿದ ಈಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರು ಈ ಫೋಟೋ ಹಂಚಿಕೊಂಡಿದ್ದಾರೆ .ಇನ್ನು ನಾಲ್ಕು ಕಂತಿನ ಹಣ ಬ್ಯಾಂಕ್ ನಲ್ಲಿ ಠೇವಣಿ ಇರಿಸಿದ್ದಾರೆ. ನಮ್ಮಂತಹ ಕೂಲಿ ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಆಧಾರವಾಗಿದೆ. ರೇಷನ್ ಕಾರ್ಡ್ ತಿದ್ದು ಪಡಿಗೆ ಮತ್ತು ಅರ್ಜಿ ಸಲ್ಲಿಸಲು ಸಹಕರಿಸಿದವರಿಗೆ ಕುಸುಮಾ ಥ್ಯಾಂಕ್ಸ್ ಹೇಳಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…