ಮಂಗಳೂರು: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಉದ್ಯಮ ಕ್ಷೇತ್ರದ ಅದ್ವಿತೀಯ ಸಾಧಕರಾಗಿ ಸಾವಿರಾರು ಜನರ ಬದುಕಿಗೆ ಬೆಳಕಾದ ಅಭಿವೃದ್ದಿಯ ರೂವಾರಿ , ದೈವ, ದೇವಸ್ಥಾನಗಳ ಅಭಿವೃದ್ಧಿಯ ಪ್ರೇರಕ ಶಕ್ತಿಯಾಗಿ ಕರಾವಳಿಯ ನೂರಾರು ಸಂಘ ಸಂಸ್ಥೆಗಳಿಗೆ ನೆರವಿನ ಶಕ್ತಿ ನೀಡಿದ ಮಹಾದಾನಿಗಳಾದ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಒಲಿದು ಬಂದಿದ್ದು,
ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ ಸಮಾರಂಭ ಜರಗಲಿದೆ ಎಂದು ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಸಮಾರಂಭದಲ್ಲಿ ಇತರ ಸಂಘ ಸಂಸ್ಥೆಗಳಿಗೂವ ಗೌರವಾರ್ಪಣೆ ಮಾಡುವ ಅವಕಾಶ ಇದೆ. ಹೆಸರನ್ನು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ,ಅಡ್ಯಾರ್ (9845172865) ಅಥವಾ ಜೊತೆಕಾರ್ಯದರ್ಶಿ ಶ್ರೀ ರವಿಚಂದ್ರ ಶೆಟ್ಟಿ ಅಶೋಕನಗರ (9448623375) ಅವರಲ್ಲಿ ನೋಂದಾಯಿಸ ಬಹುದು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…