ಜನ ಮನದ ನಾಡಿ ಮಿಡಿತ

Advertisement

ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ದಸ್ತಗಿರಿ ಮಾಡುವಲ್ಲಿ ಬಂಟ್ವಾಳ ಗ್ರಾ. ಪೊಲೀಸರು ಯಶಸ್ವಿ

ಬಂಟ್ವಾಳ: ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ದಸ್ತಗಿರಿ ಮಾಡುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.


ಪುತ್ತೂರು ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್‌ ಶರೀಫ್(44) ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ನ್ಯಾಯಂಗ ಬಂಧನ ವಿಧಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಗೆ ಸಂಬಂಧಿಸಿ 2004ರ ನವೆಂಬರ್ ೭ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಕಳ್ಳತನ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡ್ಡಿದ್ದನು.ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಹಲವಾರು ವಿಳಾಸ, ಬದಲಾವಣೆ ಮಾಡಿಕೊಂಡು ಬಂಧನಕ್ಕೆ ಸಿಗದೇ ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪುತ್ತಿಗೆ ಎಂಬಲ್ಲಿ ವಾಸವಾಗಿದ್ದನು.ಮೊಹಮ್ಮದ್ ಶರೀಫ್ ಇತ್ತೀಚಿಗೆ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ದಸ್ತಗಿರಿ ಆಗಿ ಇತ್ತೀಚಿಗೆ ಜಾಮೀನಿನ ಮೇಲೆ ಬಿಡುಗಡೆ ಆಗಿರುತ್ತಾನೆ.
ಈ ಕಾರ್ಯಚರಣೆಯನ್ನು ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕ ಶಿವಕುಮಾರ್ ಅವರ ನೇತೃತ್ವದಲ್ಲಿ ಪಿಎಸ್ಐ ಗಳಾದ ಹರೀಶ್ ಎಂ ಆರ್ ಮತ್ತು ಮೂರ್ತಿ ಹಾಗೂ ಸಿಬ್ಬಂದಿಯವರಾದ ಹರಿಶ್ಚಂದ್ರ ಮತ್ತು ಗಣೇಶ ಅವರು ಕಾರ್ಯಚರಣೆ ನಡೆಸಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!