ಉಡುಪಿ: ಶಿವಳ್ಳಿ ಗ್ರಾಮದ ಬೇಕ್ ಲೇನ್ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್ ಸ್ಟೋರ್ಸ್ ನ ಶೆಟರ್ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಪ್ಪಳ ಜಿಲ್ಲೆಯ ಗಜೇಂದ್ರಗಡದ ನಿವಾಸಿ ಮಂಜುನಾಥ್ ಚಿದಾನಂದಪ್ಪ ನರತೆಲಿ(24) ಉಡುಪಿ ಜಿಲ್ಲೆಯ ಹಟ್ಟಿಯಂಗಡಿಯ ನಿವಾಸಿಗಳಾದ ಪ್ರಸಾದ್(22) ಕಿಶನ್(20) ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ಅ.31ರಂದು ರಾತ್ರಿ ಬೇಕ್ ಲೇನ್ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್ ಸ್ಟೋರ್ಸ್ ನ ಶೆಟರ್ ಒಡೆದು 60 ಸಾವಿರ ರೂ. ನಗದು ಕಳ್ಳತನ ಮಾಡಿ ಪರಾರಿಯಾಗಿದ್ದರು. ಕಾರ್ಯಾಚರಣೆಗೆ ಇಳಿದ ಪೊಲೀಸರು ಮಣಿಪಾಲದ ಶಿಂಬ್ರಾ ಬ್ರಿಡ್ಜ್ ಬಳಿ ಬುಧವಾರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಸುಮಾರು 5,00,000/- ರೂ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…